Sunday, September 8, 2024

ಚಿತ್ತೂರು: ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪುರ: ಕೃಷಿ ಇಲಾಖೆಯ ವತಿಯಿಂದ 2023-24ನೇ ಸಾಲಿನ ಆತ್ಮ ಯೋಜನೆಯಡಿಯಲ್ಲಿ 6 ವಾರದ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮಕ್ಕೆ ಚಿತ್ತೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ಆತ್ಮ ರೈತ ಗುಂಪಿನಲ್ಲಿ ಚಾಲನೆ ನೀಡಲಾಯಿತು.

ಪ್ರಗತಿಪರ ರೈತರಾದ ಡಾ. ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವಿರಾಜ್ ಶೆಟ್ಟಿ, ಉಪಾಧ್ಯಕ್ಷೆ ಸುಬ್ಬಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲ, ಕೃಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಗಜೇಂದ್ರ ಶೇರಿಗಾರ ಮೊದಲಾದವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ ಕೃಷಿಕ ಮುಂಬಾರು ದಿನಕರ ಶೆಟ್ಟಿ ಅವರು ಅಡಿಕೆಯ ಗಿಡದ ಆಯ್ಕೆ, ನಾಟಿಯಿಂದ ಹಿಡಿದು ಮಾರುಕಟ್ಟೆಯವರೆಗಿನ ಸಂಪೂರ್ಣ ತಾಂತ್ರಿಕತೆಗಳು ಹಾಗೂ ರೋಗ, ಕೀಟ ನಿಯಂತ್ರಣದ ಕುರಿತು ವಿವರಿಸಿದರು.
ಕೃಷಿ ಸಖಿ ಶೋಭಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!