Sunday, September 8, 2024

‘ನೆತ್ತರ ನೆರವು’ ಕಾರ್ಯಕ್ರಮದ ಸಂಯೋಜಕರಾಗಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘ ಕುಂದಾಪುರ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಡಾ.ಬಿ.ಬಿ ಹೆಗ್ಡೆ ಕಾಲೇಜು, ಭಂಡಾಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಶ್ರೀ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇವರ ಸಹಯೋಗದೊಂದಿಗೆ ಅಕ್ಟೋಬರ್ ೨೧ರ ಶನಿವಾರ ಆರ್. ಎನ್ .ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಿರುವ ಬೃಹತ್ ಮಟ್ಟದ ರಕ್ತದಾನ ಶಿಬಿರ ನೆತ್ತರ ನೆರವು ಕಾರ್ಯಕ್ರಮದ ಸಂಯೋಜಕರಾಗಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪ್ರಧಾನ ಕಾರ್ಯದರ್ಶಿ, ಪ್ರಥಮ ದರ್ಜೆ ಗುತ್ತಿಗೆದಾರರು ಆದ ಶ್ರೀ ಲ. ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಆಯ್ಕೆಯಾಗಿದ್ದಾರೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!