Sunday, September 8, 2024

ಸೇನಾಪುರದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರರವರಿಗೆ ಸೇನಾಪುರದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ ನೀಡುವಂತೆ ಹೋರಾಟ ಸಮಿತಿ ವತಿಯಿಂದ ಅ.28ರಂದು ಶಿವಮೊಗ್ಗದ ಸಂಸದರ ನಿವಾಸದಲ್ಲಿ ಮನವಿಯನ್ನು ಸಲ್ಲಿಸಲಾಯಿತು.

ಹೋರಾಟ ಸಮಿತಿಯ ಸಂಚಾಲಕ ರಾಜೀವ ಪಡುಕೋಣೆ ಹಾಗೂ ಹೋರಾಟ ಸಮಿತಿಯ ಮುಖಂಡರಾದ ಪ್ರಭು ಕೆನಡಿ ಪೆರೆರ ಸೇನಾಪುರ, ರಾಮ ಪೂಜಾರಿ ಮುಲ್ಲಿಮನೆ ಪಡುಕೋಣೆ, ರಾಜೇಶ ಪಡುಕೋಣೆ, ಮತ್ತು ನರಸಿಂಹ ದೇವಾಡಿಗ ಆಲೂರು ಭಾಗವಹಿಸಿದ್ದರು.

ಮನವಿ ಸ್ವೀಕರಿಸಿದ ಸಂಸದರು ಈ ವಿಚಾರವನ್ನು ರೈಲ್ವೆ ಇಲಾಖೆ ಗಮನಕ್ಕೆ ತಂದು ಅತಿ ಶೀಘ್ರವಾಗಿ ಕ್ರಮವಹಿಸುವುದಾಗಿ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!