Sunday, September 8, 2024

ಸಾಹಿತಿ, ಪತ್ರಕರ್ತ ಶೇಖರ ಅಜೇಕಾರು ನಿಧನ

ಜನಪ್ರತಿನಿಧಿ ವಾರ್ತೆ (ಕಾರ್ಕಳ) : ಹಿರಿಯ ಪತ್ರಕರ್ತ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿ ಶೇಖರ ಅಜೆಕಾರು ಅವರು ಹೃದಯಘಾತದಿಂದ ಆ.31ರ ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.

ಶೇಖರ್ ಅಜೆಕಾರ್ ಅವರು ಒಟ್ಟು 22 ಕೃತಿಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತಿದ್ದರು.

ಶೇಖರ್ ಅವರು ಹಲವು ಪತ್ರಿಕಾ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.

10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಅಮಂತ್ರನ ಪ್ರಶಸ್ತಿ 2019, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 1995 ರಲ್ಲಿ ಪ್ರಶಸ್ತಿ ಲಭಿಸಿದೆ.

ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗುರುತರವಾದ ಸೇವೆ ಸಲ್ಲಿಸಿದ ಶೇಖರ ಅಜೇಕಾರು ಅವರು ಅಪಾರ ಸ್ನೇಹ ಬಳಗ, ಕುಟುಂಬದವರನ್ನು ಅಗಲಿದ್ದಾರೆ.  

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!