spot_img
Tuesday, April 28, 2026
spot_img

ಕಂಡ್ಲೂರು ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ


ಕುಂದಾಪುರ: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ನ.2 ಗುರುವಾರ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಇಲ್ಲಿನ ಕಾರ್ಯವೈಖರಿಗಳನ್ನು ವೀಕ್ಷಿಸಿದರು.

ಈ ಸಂದರ್ಭ ವಿದ್ಯಾರ್ಥಿಗಳ ಜೊತೆ ಮಾತನಾಡಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ. ಯಾವುದೇ ಹಣ, ಹೆಸರಿನ ಹಿಂದೆ ಹೋಗಬಾರದು. ಶಿಕ್ಷಕರು ಮಕ್ಕಳಿಗೆ ಪಾಠ ಕಲಿಸುವಾಗ ಸೇವಾ ಮನೋಭಾವನೆ ಮೂಲಕ ಜಾತಿ, ಮತ, ಬೇಧವಿಲ್ಲದ ಸಮಾಜಕಳಕಳಿಯ ಚಿಂತನೆ ಮೂಡಿಸಬೇಕು. ಸಹಬಾಳ್ವೆ ಬೆಳೆಸಿಕೊಂಡು ಪರಿಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಂದಾಗಬೇಕು. ಮಕ್ಕಳಲ್ಲಿ ಸರಕಾರಿ ವೈದ್ಯಕೀಯ ವ್ಯವಸ್ಥೆಯ ಬಗ್ಗೆ ಅರಿವು ಬರಬೇಕು ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ರೋಗಿಗಳ ಬಳಿ ತೆರಳಿ ಆರೋಗ್ಯಕ್ಷೇಮ ವಿಚಾರಿಸಿ ಹಣ್ಣುಹಂಪಲು ನೀಡಿದರು. ವೈದ್ಯರುಗಳನ್ನು ಭೇಟಿಯಾಗಿ ಅವರಿಂದ ಸಲಹೆ ಪಡೆದು ಅಗತ್ಯ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು.

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರದ ಪ್ರಧಾನ ಕಾರ್ಯದರ್ಶಿ ಹುಸೇನ್ ಹೈಕಾಡಿ, ಸದಸ್ಯ ಮನ್ಸೂರ್ ಮರವಂತೆ, ಸಮಾಜಸೇವಕ
ಝುನೇದ್, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಪಿಜಿಶಿಯನ್ ಡಾ. ನಾಗೇಶ್, ಶುಶ್ರೂಷಕ ಪ್ರಭಾರ ಅಧೀಕ್ಷಕಿ ಮಂಜುಳಾ ಶುಶ್ರೂಷಕಾಧಿಕಾರಿ ಶ್ಯಾಮಲಾ, ಆಪ್ತ ಸಮಾಲೋಚಕಿ ವೀಣಾ, ಐಟಿಡಿಪಿ ಸಂಯೋಜಕಿ ಸುಮಲತಾ, ಐಸಿಟಿಸಿ ಆಪ್ತ ಸಮಾಲೋಚಕಿ ನಳಿನಾಕ್ಷಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಂಡ್ಲೂರು ಇದರ ಚಯರ್ಮೆನ್ ಮೌಲಾನಾ ಉಬೇದುಲ್ಲಾ ನದ್ವಿ, ಟ್ರಸ್ಟಿ ಮೌಲಾನಾ ರಿಝ್ವಾನ ನದ್ವಿ, ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯಿನಿ ಕುಬ್ರಾ ನವಾಝ್, ಸಹ ಶಿಕ್ಷಕರಾದ ರುಝೈನಾ ಅಂಝುಮ್, ಆಲಿಯಾ, ಅಫಿಫಾ ಮರಿಯಮ್, ಆಯಿಷಾ ಹೀರಾ, ಪ್ರಮೀಳಾ ಎಸ್. ಅರಳಿಕಟ್ಟೆ, ಇಸ್ಲಾಮಿಕ್ ಶಿಕ್ಷಕಿ ನಾಝನಿನ್, ಕಚೇರಿ ಮುಖ್ಯಸ್ಥೆ ನಝೀಪಾ, ಸಿಬ್ಬಂದಿ ನಿಯಾಝ್ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!