Sunday, September 8, 2024

ಡಾ. ಬಿ. ಬಿ. ಹೆಗ್ಡೆ ಕಾಲೇಜು: ‘ಮೇರಿ ಮಾಠಿ ಮೇರಾ ದೇಶ್’

   ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.,  ಎನ್.ಸಿ.ಸಿ. ಘಟಕದ ಸಂಯುಕ್ತ ಆಶ್ರಯದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರರಿಗೆ ಗೌರವ ಸಲ್ಲಿಸುವ ’ಮೇರಿ ಮಾಠಿ ಮೇರಾ ದೇಶ್’ ಅಭಿಯಾನ ನಡೆಯಿತು. 
ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳು ಕುಂದಾಪುರದ ತಾಲೂಕು ಪಂಚಾಯತ್ ಆವರಣದಿಂದ ಸಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಹಾಗೂ ಎನ್.ಸಿ.ಸಿ. ಅಧಿಕಾರಿಗಳಾದ ಹರೀಶ್ ಬಿ. ಹಾಗೂ  ಶರತ್ ಕುಮಾರ್ ಉಪಸ್ಥಿತರಿದ್ದರು. 90 ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು. 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!