Sunday, September 8, 2024

ನಿಗಮ ಮಂಡಳಿ : ಮೊದಲ ಬಾರಿ ಶಾಸಕರಾದವರಿಗೆ ಸ್ಥಾನವಿಲ್ಲ : ಡಿಕೆಶಿ

ಜನಪ್ರತಿನಿಧಿ ವಾರ್ತೆ : ಉಪ ಮುಖ್ಯಮಂತ್ರಿ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ನಿಗಮ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ತೆಲಂಗಾಣ ಚುನಾವಣೆ ಪ್ರಚಾರ ಬುಧವಾರ ಮುಗಿಯಲಿದೆ, ಆದಷ್ಟು ಶೀಘ್ರದಲ್ಲಿ ನಿಗಮ – ಮಂಡಳಿ ನೇಮಕ ಪಟ್ಟಿ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತಮಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನ ನೀಡುತ್ತೇವೆ. ನಾನು, ಮುಖ್ಯಮಂತ್ರಿ, ಒಕ್ಷದ ರಾಜ್ಯದ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಚರ್ಚೆ ಮಾಡಿ ಪಟ್ಟಿಯನ್ನು ಅಂತಿಮ ಮಾಡಿದ್ದೇವೆ. ಸುರ್ಜೇವಾಲ ಹೈಕಮಾಂಡ್‌ಗೆ ಪಟ್ಟಿಯನ್ನು ಹಸ್ತಾಂತರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಇನ್ನು, ಮೊದಲ ಬಾರಿ ಶಾಸಕರಾದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಿಲ್ಲ ಎಂದದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!