Sunday, September 8, 2024

ಸಿಬಿಐ ತನಿಖೆಯಿಂದ ಡಿಸಿಎಂ ಡಿಕೆಶಿ ಸೇಫ್‌ !

ಜನಪ್ರತಿನಿಧಿ ವಾರ್ತೆ : ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ವಿರುದ್ಧ ಸಿಬಿಐ ತನಿಖೆಗೆ ತಡೆ ನೀಡಿದ್ದ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಹೈಕೋರ್ಟ್‌ ಇಂದು( ಬುಧವಾರ) ಎತ್ತಿ ಹಿಡಿದಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ, ಡಿಕೆಶಿ ಆದಾಯ ಮೀರಿದ ಆಶ್ತಿ ಗಳಿಕೆಯ ವಿರುದ್ಧ ತನಿಖೆಗೆ ಸಿಬಿಐಗೆ ಅನುಮತಿ ನೀಡಿತ್ತು, ಇತ್ತೀಚೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟ ಅನುಮತಿಯನ್ನು ವಾಪಾಸ್‌ ಪಡೆಯಲು ನಿರ್ಧರಿಸಿತ್ತು. ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದಿ ರಾಜ್ಯ ಉನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯ ಪೀಠ, ರಾಜ್ಯ ಸರ್ಕಾರದ ಆದೇಶವನ್ನು ಈದುವರೆಗೂ ಯಾರೂ ಪ್ರಶ್ನೆ  ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ  ಎಂದು ನ್ಯಾಯಾಲಯ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!