Sunday, September 8, 2024

ಕೋಟತಟ್ಟು ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರ ವಿಶೇಷ ಗ್ರಾಮ ಸಭೆ

ಕೋಟ, ಡಿ.1: ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಡಿ.1ರಂದು ವಿಕಲಚೇತನರ ವಿಶೇಷ ಗ್ರಾಮ ಸಭೆ ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ.ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷೀಯ ಮಾತುಗಳನ್ನಾಡಿದ ಕೆ.ಸತೀಶ್ ಕುಂದರ್ ಬಾರಿಕೆರೆ ಅವರು, ವಿಕಲಚೇತನರು ಯಾವ ರೀತಿಯಲ್ಲೂ ಇತರರಿಗೆ ಕಡಿಮೆ ಸಾಮರ್ಥ್ಯ ಹೊಂದಿಲ್ಲ. ವಿಕಲಚೇತನರ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಇನ್ನೂ ಹೆಚ್ಚಿನ ಸರಕಾರದ ಯೋಜನೆ ಹಾಗೂ ಸೌಲಭ್ಯವನ್ನು ಪ್ರಾಮಾಣಿಕವಾಗಿ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಿಕಲಚೇತನರಿಗೆ ಸಹಾಯಧನದ ಚೆಕ್ ವಿತರಿಸಲಾಯಿತು.

ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ಶ್ರೀಮತಿ ಅಶ್ವಿನಿ, ಶ್ರೀಮತಿ. ವಿದ್ಯಾ ಪಿ, ಶ್ರೀಮತಿ. ಜ್ಯೋತಿ, ಶ್ರೀಮತಿ. ಸೀತಾ, ಎಂ ಆರ್ ಡಬ್ಲ್ಯೂ ಉಡುಪಿಯ ವೈ ಮಧುಸೂಧನ್ ರಾವ್ , ಸಂಪನ್ಮೂಲ ವ್ಯಕ್ತಿಯಾಗಿ ವೈಶಾಂಕ್, ವಿಕಲ ಚೇತನ ಫಲಾನುಭವಿಗಳು, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ನಿರ್ವಹಿಸಿ, ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!