Friday, October 18, 2024

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಆರೋಪಿಗೆ ಎರಡು ದಿನಗಳ ಕಾಲ ಜಾಮೀನು

ಜನಪ್ರತಿನಿಧಿ ವಾರ್ತೆ : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌  ನೆಟ್ಟಾರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆಎರಡು ದಿನಗಳ ಜಾಮೀನು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ  ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ನನ್ನು 15 ನೇ ಆರೋಪಿಯಾಗಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಸುಳ್ಯದಲ್ಲಿ ಈತನ ಎರಡು ದಿನಗಳ ಜಾಮೀನು ದೊರೆತಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಈತ ಮೈಸೂರಿನ ಜೈಲಿನಲ್ಲಿದ್ದು ಜಾಮೀನು ಅವಧಿ ಮುಗಿದ ತಕ್ಷಣ ಮತ್ತೆ ಜೈಲು ಸೇರಬೇಕಿದೆ.

2022 ಜುಲೈ 26ರಂದು ಬೆಳ್ಳಾರೆಯಲ್ಲಿ ತನ್ನ ಚಿಕನ್‌ ಶ್ಟಾಲ್‌ ಎದುರೇ ದುಷ್ಕರ್ಮಿಗಳು ಪ್ರವೀಣ್‌ ನೆಟ್ಟಾರು ಹತ್ಯೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಹಲವರನ್ನು ಬಲೆ ಬೀಸಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!