spot_img
Monday, April 27, 2026
spot_img

ಬರ ಘೋಷಣೆಯಲ್ಲಿ ರಾಜಕೀಯ ಎನ್ನುವ ಶಾಸಕರ ಹೇಳಿಕೆ ಸತ್ಯಕ್ಕೆ ದೂರವಾದುದು-ವಿಕಾಸ್ ಹೆಗ್ಡೆ

ಕುಂದಾಪುರ: ಬರ ಘೋಷಣೆಯಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ ಎನ್ನುವ ಕುಂದಾಪುರ ಹಾಗೂ ಬೈಂದೂರು ಶಾಸಕರ ಹೇಳಿಕೆಯು ಸತ್ಯಕ್ಕೆ ದೂರವಾದುದು. ತಮ್ಮ ವೈಫಲ್ಯವನ್ನು ಮರೆಮಾಚಲು ಸರ್ಕಾರವನ್ನು ದೂರುವುದು ಇವರ ಸಣ್ಣತನವನ್ನು ತೋರಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಐದಕ್ಕೆ ಐದೂ ಶಾಸಕರು ಬಿಜೆಪಿ ಆದರೆ ಕಾರ್ಕಳ ತಾಲ್ಲೂಕು ಹೇಗೆ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಸೇರಿಕೊಂಡಿತು. ಆರೋಪ ಮಾಡುವ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದ ಬರದ ಪರಿಸ್ಥಿತಿಯನ್ನು ಸರ್ಕಾರದ ಮಟ್ಟದಲ್ಲಿ ಸಂಬಂಧಿತರ ಗಮನಕ್ಕೆ ತರಲು ವಿಫಲವಾದದ್ದೇ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕು ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಸೇರದೆ ಇರಲು ಕಾರಣ. ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡಲಿಲ್ಲ. ಇನ್ನಾದರೂ ಶಾಸಕರುಗಳು ರಾಜಕಾರಣವನ್ನು ಬದಿಗಿಟ್ಟು ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!