spot_img
Sunday, April 26, 2026
spot_img

ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಪ್ರಿಯಾಂಕ್ ಖರ್ಗೆ

ಜನಪ್ರತಿನಿಧಿ ವಾರ್ತೆ (ಕಲಬುರಗಿ) : ಕಲಬುರಗಿ ಬಿಜೆಪಿ ಮುಖಂಡ ಮಣಿಕಾಂತ್‌ ರಾಥೋಡ್‌ ಮೇಲೆ ತಾನು ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಮಾನನಷ್ಠ ಮೊಕದ್ದಮೆ ದಾಖಲಿಸುವುದಾಗಿ ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾಯಕರ ನಿರಂತರ ಮೌಖಿಕ ದಾಳಿಯಿಂದ ತನಗೆ ನೋವಾಗಿದೆ ಮತ್ತು ತನ್ನ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗಿದೆ ಎಂದು ಹೇಳಿದ ಪ್ರಿಯಾಂಕ್, ದೂರುದಾರರ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದರು.

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರದಿಂದ ಮಣಿಕಂಠ ರಾಠೋಡ್ ಅವರನ್ನು ಸೋಲಿಸಿದ್ದರು.

ಚಿತ್ತಾಪುರ ಬಿಜೆಪಿ ಅಭ್ಯರ್ಥಿಯ ಈ ಒಂದು ದೂರು ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದ ಹಿಡಿದು ಆರ್ ಅಶೋಕವವರೆಗೆ ಬಹುತೇಕ ಎಲ್ಲಾ ಬಿಜೆಪಿ ನಾಯಕರಿಂದ ನಾನು ಟೀಕೆಗಳನ್ನು ಸ್ವೀಕರಿಸಿದ್ದೇನೆ. ಈಗ ತನಿಖೆಯಿಂದ ವಿಭಿನ್ನ ಸತ್ಯ ಹೊರಬಿದ್ದಿದೆ. ನಾನು ಯಾರನ್ನೂ ಬಿಡುವುದಿಲ್ಲ. ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ನನಗೆ ವಿಶ್ವಾಸಾರ್ಹತೆ ಇಲ್ಲವೇ? ಇದನ್ನೆಲ್ಲ ಕೇಳಲು ನಾನಿಲ್ಲಿ ಇಲ್ಲ’ ಎಂದು ವರದಿಗಾರರಿಗೆ ಹೇಳಿದ್ದಾರೆ.

ನವೆಂಬರ್ 19ರಂದು ನೀಡಿರುವ ದೂರಿನಲ್ಲಿ, ಮಾಲಗತ್ತಿ ಗ್ರಾಮದ ತಮ್ಮ ಜಮೀನಿನಿಂದ ಕಲಬುರಗಿಗೆ ತೆರಳುತ್ತಿದ್ದಾಗ ಚಿತ್ತಾಪುರ ಮತಕ್ಷೇತ್ರದ ಶಂಕರವಾಡಿ ಕ್ರಾಸ್ ಬಳಿ ಅಧಿಕಾರಿಗಳು ಹಾಗೂ ರಾಜಕೀಯ ವಿರೋಧಿಗಳು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

‘ರಾಜ್ಯ ಸರ್ಕಾರದ ವಿರುದ್ಧ ಏನನ್ನೂ ಕಂಡುಹಿಡಿಯದ ಬಿಜೆಪಿ ನಾಯಕರು ಹತಾಶರಾಗಿದ್ದಾರೆ. ಹೀಗಾಗಿ, ಇಂತಹ ನಾಟಕಗಳಲ್ಲಿ ತೊಡಗಿದ್ದಾರೆ. ಅವರು ಅದು ನಿಜವೋ ಸುಳ್ಳೋ ಎಂದು ಸಹ ಪರಿಶೀಲಿಸಲಿಲ್ಲ ಮತ್ತು ಅವರ (ರಾಠೋಡ್) ರಕ್ಷಣೆಗೆ ಮುಂದಾದರು. ಈ ವ್ಯಕ್ತಿಯ ವಿರುದ್ಧ ಕಳ್ಳತನ, ವಂಚನೆ ಸೇರಿ ಇತರ 22 ಅಪರಾಧ ಪ್ರಕರಣಗಳು ದಾಖಲಾಗಿವೆ ಮತ್ತು ಒಂದು ವರ್ಷ ಶಿಕ್ಷೆಯನ್ನು ಸಹ ಅನುಭವಿಸಿದ್ದಾರೆ. ತನಿಖೆ ಪೂರ್ಣಗೊಳ್ಳಲು ನಾನು ಕಾಯುತ್ತಿದ್ದೆ, ಈ ದೂರು ಸುಳ್ಳು ಎಂದು ಸಾಬೀತಾಗಿದೆ ಮತ್ತು ಆ ಸಮಯದಲ್ಲಿ ದೂರುದಾರರು ಮಾಲಗತ್ತಿಯಲ್ಲಿ ಇರಲಿಲ್ಲ’ ಎಂದು ಅವರು ಹೇಳಿದರು.

ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!