Sunday, September 8, 2024

ಅಧಿವೇಶನದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಿಎಂ ಮಾತುಕತೆ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) : ವಿಧಾನಸಭಾ ಅಧಿವೇಶನ ವೀಕ್ಷಿಸಲು ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಹೊತ್ತು ಸಮಯ ಕಳೆದಿದ್ದಾರೆ. ಮಾತ್ರವಲ್ಲದೇ ತಮ್ಮ ಅಧಿಕೃತ ‌ʼಎಕ್ಸ್ʼ ಖಾತೆಯಲ್ಲಿ ವಿದ್ಯಾರ್ಥಿಗಳೊಂದಿಗೆ ತೆಗೆಸಿಕೊಂಡ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಒಂದಷ್ಟು ಹೊತ್ತು ಮಾತನಾಡುತ್ತಾ, ಸರ್ಕಾರದ ಕಾರ್ಯವೈಖರಿ, ಅಭಿವೃದ್ಧಿ ಕಾರ್ಯಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಅವರಲ್ಲಿನ ಕುತೂಹಲಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದೆ ಎಂದು ಅವರು ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ವೇಳೆ ಶಕ್ತಿ ಯೋಜನೆಯಿಂದ ತಮಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೆಣ್ಣುಮಕ್ಕಳು ಸಂತಸ ವ್ಯಕ್ತಪಡಿಸಿ, ಯೋಜನೆ ಜಾರಿಗೊಳಿಸಿದ್ದಕ್ಕಾಗಿ ನನಗೆ ಧನ್ಯವಾದ ತಿಳಿಸಿದರು ಎಂದು ಕೂಡ ಅವರು ವ್ಯಕ್ತಪಡಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಮುಖ್ಯಮಂತ್ರಿಗಳೊಂದಿಗೆ ಸಾಥ್‌ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!