Sunday, September 8, 2024

ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? : ಕಾಂಗ್ರೆಸ್‌ ಟೀಕೆ

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ಸಂಸತ್‌ ಕಲಾಪದ ಸಂದರ್ಭದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪಬ್ಲಿಕ್‌ ಗ್ಯಾಲರಿಯಿಂದ ಸದನಕ್ಕೆ ಜಿಗಿದು ಹಳದಿ ಬಣ್ಣದ ಗ್ಯಾಸ್‌ ಪಸರಿಸಿದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕೆಣಕಿದೆ.   

ತನ್ನ ಅಧಿಕೃತ ಸಾಮಾಜಿಕ ಮೈಕ್ರೋ ಬ್ಲಾಗಿಂಗ್‌ ಖಾತೆ ʼಎಕ್ಸ್‌ʼನಲ್ಲಿ ಕೇಂದ್ರವನ್ನು ಟೀಕಿಸಿದ ಕಾಂಗ್ರೆಸ್‌,  300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ, ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ, ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಎಂದು ಕಾಂಗ್ರೆಸ್‌ ಖಾರವಾಗಿ ಪ್ರಶ್ನಿಸಿದೆ.

ಮಾತ್ರವಲ್ಲದೇ, ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ ಎಂದು ಕೂಡ ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!