Sunday, September 8, 2024

ಹಿಜಾಬ್‌ ವಿವಾದ : ಹಿಜಾಬ್‌ ನಿಷೇಧ ಆದೇಶವನ್ನು ಈವರೆಗೆ ವಾಪಾಸ್‌ ಪಡೆದಿಲ್ಲ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಮೈಸೂರು) : ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಆದೇಶವನ್ನು ಈವರೆಗೆ ವಾಪಾಸ್‌ ಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧಿಸಿರುವ ಕಾನೂನನ್ನು ಇನ್ನೂ ಹಿಂಪಡೆದಿಲ್ಲ. ನಿನ್ನೆ(ಶುಕ್ರವಾರ) ಕವಲಂದೆಯಲ್ಲಿ ಯಾರೋ ಪ್ರಶ್ನೆ ಮಾಡಿದ್ದಕ್ಕೆ ಆ ರೀತಿ ಉತ್ತರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇನ್ನು, ಹಿಜಾಬ್‌ ಹಿಂಪಡೆಯುವ ಬಗ್ಗೆ ಯೋಚನೆ ಮಾಡಲಾಗಿದೆ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.  

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!