Sunday, September 8, 2024

40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ಬಿಡುಗಡೆ ಮಾಡುವೆ | ಡಿಕೆಶಿ ಆದ್ಮೇಲೆ ಅಪ್ಪಾಜಿಯದ್ದೇ ಕೇಸ್‌ ! : ಯತ್ನಾಳ್‌ ಸ್ಪೋಟಕ ಹೇಳಿಕೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದರೆ, 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ಬಿಡುಗಡೆ ಮಾಡುವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್‌ ಸೋಂಕಿನ ಸಂದರ್ಭದಲ್ಲಿ  40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಪ್ರರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಕುಟುಕಿದ ಅವರು,  ಡಿಕೆ ಶಿವಕುಮಾರ್ ಕೇಸ್ ನಂತರ ಅಪ್ಪಾಜಿಯದ್ದೇ (ಯಡಿಯೂರಪ್ಪ) ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೇ, ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುವೆ ಎಂದೂ ಹೇಳಿದ್ದಾರೆ.

ಇನ್ನು, 45 ರೂ. ಮಾಸ್ಕ್ ಗೆ 485 ಬಿಲ್ ಮಾಡಿದ್ದಾರೆ. 10 ಸಾವಿರ ಬೆಡ್‌ಗಳ ಬಾಡಿಗೆ ಒಂದು ದಿನದ ಬಿಲ್ ನಲ್ಲಿ ಖರೀದಿ ಮಾಡಿದ್ರೆ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್‌ ಗಳಲ್ಲೂ ಭ್ರಷ್ಟಾಚಾರ ನಡೆದಿದೆ.  ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ಬಿಲ್ ಮಾಡಿದ್ದರು. ಇನ್ನು ಬಡವರು ಏನು ಮಾಡಬೇಕು. ಕೋವಿಡ್‌ ಸಂದರ್ಭದಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ ಎಂದು ಅವರು ಸ್ವಪಕ್ಷಿಯರ ಮೇಲೆ ಹರಿಹಾಯ್ದಿದ್ದಾರೆ.

ನನ್ನ ಉಚ್ಚಾಟನೆ ಮಾಡಿದ ಮರುದಿನವೇ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುವೆ. ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಬಿಚ್ಚಿಡುತ್ತೇನೆ. ಉಚ್ಚಾಟನೆ ಮಾಡಿದ ಮರುದಿನ ಎಲ್ಲಾ ದಾಖಲೆ ಬಿಡುಗಡೆ ಮಾಡುವೆ ಎಂದಿದ್ದಾರೆ.

ಇನ್ನು, ಮಾಜಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದ ಯತ್ನಾಳ್, ಕೃಷಿ ಸಚಿವರು ಹೇಗಿದ್ದರು ಎಂದು ಆ ಇಲಾಖೆಯ ಅಧಿಕಾರಿಗಳನ್ನು ಕೇಳಿ. ರೈತರಿಗೆ ದೋಖಾ ಮಾಡಿದವರು ಬಿ.ಸಿ. ಪಾಟೀಲ್ ಎಂದು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!