Sunday, September 8, 2024

ಮಾಜಿ ಶ್ಯಾಡೋ ಸಿಎಂ ಬಿ. ವೈ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ ? : ಕಾಂಗ್ರೆಸ್‌ ಪ್ರಶ್ನೆ

ಜನಪ್ರತಿನಿಧಿ ವಾರ್ತೆ ( ಬೆಂಗಳೂರು) : ನಿನ್ನೆ(ಮಂಗಳವಾರ) ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ನೀಡಿರುವ ಸ್ಪೋಟಕ ಹೇಳಿಕೆಯನ್ನು ಉಲ್ಲೇಖಿಸಿ ಆಡಳಿತರೂಢ ಕಾಂಗ್ರೆಸ್‌ ಬಿಜೆಪಿಯನ್ನು ಕೆಣಕಿದೆ.

ಬಿಜೆಪಿಯನ್ನು ಟೀಕಿಸಿದ ಕಾಂಗ್ರೆಸ್‌, ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ರಾಜ್ಯ ಬಿಜೆಪಿ ಪಕ್ಷ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ ಎಂದು ಹೇಳಿದೆ.

ಮಾತ್ರವಲ್ಲದೇ, ಮಾಜಿ ಶ್ಯಾಡೋ ಸಿಎಂ ಬಿ. ವೈ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ ? ತಮ್ಮಲ್ಲಿ ಸಾಚಾತನವಿದ್ದರೆ ಈ ಹಗರಣದ ತನಿಖೆಗೆ ಒತ್ತಾಯಿಸುತ್ತಿಲ್ಲವೇಕೆ? ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಶಾಸಕ ಯತ್ನಾಳ್‌ ನಿನ್ನೆ(ಮಂಗಳವಾರ) ತನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದರೇ, ಕೋವಿಡ್‌ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ 40 ಸಾವಿರ ಕೋಟಿಯ ಹಗರಣದ ದಾಖಲೆಗಳನ್ನು ಬಿಚ್ಚಿಡುತ್ತೇನೆ ಎಂದು ಹೇಳಿದ್ದಲ್ಲದೇ, ಡಿಕೆಶಿ ಆದ್ಮೇಲೆ ಅಪ್ಪಾಜಿಯವರದ್ದೇ (ಯಡಿಯೂರಪ್ಪ) ಕೇಸ್‌ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಉಲ್ಲೇಖಿಸಿ ಹಗಣರದ ದಾಖಲೆ ಬಿಡುಗಡೆ ಮಾಡುವೆ ಎಂದು ಗಂಭೀರವಾದ ಹೇಳಿಕೆ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!