Sunday, September 8, 2024

ಕೋಲಾರ ಜನತೆಯ “ಕೈ”ಗೆ ಚಿಪ್ಪು ಕೊಟ್ಟು, ಈಗ ಚುನಾವಣೆಗಾಗಿ ಅವರ ಕಾಲು ಹಿಡಿಯಲು ಹೊರಟಿರುವ ಸಿದ್ದರಾಮಯ್ಯ ಅವರೇ… : ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ  ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕೋಲಾರ ಅಭಿವೃದ್ಧಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಸೂಚನೆಗಳನ್ನು ನೀಡಿದ್ದರು.

ಈ ವಿಚಾರಕ್ಕೆ ಸಂಬಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ವಿರೋಧ ಪಕ್ಷ ಬಿಜೆಪಿ, ಕೋಲಾರ ಜನತೆಯ “ಕೈ”ಗೆ ಚಿಪ್ಪು ಕೊಟ್ಟು, ಈಗ ಚುನಾವಣೆಗಾಗಿ ಅವರ ಕಾಲು ಹಿಡಿಯಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಅವರೇ, ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದೆ.

▪️ಕೋಲಾರದ ಶಾಸಕರಿಗೆ ಮಂತ್ರಿಗಿರಿ ನೀಡಲಿಲ್ಲ ಏಕೆ?

▪️ಜಿಲ್ಲೆಯ ರೈತರ ಹಾಲಿಗೆ ಇನ್ನೂ ₹7 ಸಬ್ಸಿಡಿ ನೀಡಿಲ್ಲ ಏಕೆ?

▪️ಮಾವು ಬೆಳೆಗಾರರಿಗೆ ನೀಡಿದ ಆಶ್ವಾಸನೆ ಈಡೇರಿಸಿಲ್ಲ ಏಕೆ?

▪️ಸಿಎಂ ಆದ ತಕ್ಷಣವೇ ಜಿಲ್ಲೆಯನ್ನು ಜಿಹಾದಿಗಳಿಗೆ ಅಡವಿಟ್ಟಿದ್ದೇಕೆ?

▪️ಶಾಂತಿ ಆವರಿಸಿದ್ದ ಕೋಲಾರದಲ್ಲಿ ಅಶಾಂತಿ ಸೃಷ್ಟಿಸಿದ್ದೇಕೆ?

▪️ಕೋಲಾರದಲ್ಲಿ ರೈತ ಮಾಲ್ ಸ್ಥಾಪನೆ ಮಾಡುವುದು ಯಾವಾಗ?

ಸಿದ್ದರಾಮಯ್ಯರವರೇ, ಚಿನ್ನದ ಭೂಮಿ ಕೋಲಾರಮ್ಮನ ನಾಡಿಗೆ ಕಾಲಿಡುವುದಕ್ಕೆ ಯಾವ ನೈತಿಕತೆ ಉಳಿಸಿಕೊಂಡಿದ್ದೀರಿ. ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!? ಎಂದು ಖಡಕ್‌ ಆಗಿ ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!