Sunday, September 8, 2024

ಮಂಗಳೂರು – ಮಡಗಾಂವ್‌ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

ಜನಪ್ರತಿನಿಧಿ ವಾರ್ತೆ (ಮಂಗಳೂರು) : ಬಹು ನಿರೀಕ್ಷಿತ ಮಂಗಳೂರು ಹಾಗೂ ಮಡಗಾಂವ್‌ ನಡುವೆ ಸಂಚಾರ  ಮಾಡಲಿರುವ ವಂದೇ ಭಾರತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಸಭೆಯ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ಸ್ಥಳೀಯವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸದ ನಳೀನ್‌ ಕುಮಾರ್‌ ಕಟೀಲ್‌, ಶಾಸಕ ವೇದವ್ಯಾಸ ಕಾಮತ್‌, ಮೇಯರ್‌ ಸುದೀರ್‌ ಶೆಟ್ಟಿ ಕಣ್ಣೂರು ಭಾಗವಹಿಸಿದ್ದರು.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಸಂತೆ ಸೇರಿದ್ದರು. ಒಂದನೇ ಫ್ಲಾಟ್‌ ಫಾರ್ಮ್‌ ನಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ವಂದೇ ಭಾರತ್‌ ರೈಲಿನೊಂದಿಗೆ ಪ್ರಯಾಣಿಕರು ಸಂತೋಷದಿಂದ ಸೆಲ್ಫಿ ಕ್ಲಿಕ್ಕಿಸಿಕೊಂಡ ದೃಶ್ಯಗಳು ಹೇರಳವಾಗಿ ಕಂಡುಬಂದವು.

ಸ್ವದೇಶಿ ತಂತ್ರಜ್ಞಾನ : ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಚೆನ್ನೈನ ಇಂಟೆಗ್ರೆಲ್‌ ಕೋಚ್‌ ಫ್ಯಾಕ್ಟರಿಯಲ್ಲಿಯೇ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನವನ್ನು ಬಳಸಿ ತಯಾರು ಮಾಡಲಾಗಿದೆ ಎನ್ನುವುದು ವಿಶೇಷ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!