Sunday, September 8, 2024

ಮುಂಬಾರು: ಏಕಪವಿತ್ರ ನಾಗಮಂಡಲೋತ್ಸವ ಚಪ್ಪರ ಮುಹೂರ್ತ-ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ, ಜ.1: ಕಾವ್ರಾಡಿ ಗ್ರಾಮದ ಮುಂಬಾರು ಮನೆ ಕುಟುಂಬಸ್ಥರ ಸೇವೆಯಾಗಿ ಜನವರಿ 26-2024ರಂದು ನಡೆಯಲಿರುವ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.1ರಂದು ನಡೆಯಿತು.

ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಚಪ್ಪರ ಮುಹೂರ್ತ ನೆರವೇರಿಸಿ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ, ಬಾಲಚಂದ್ರ ಶೆಟ್ಟಿ ಕಾವ್ರಾಡಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ದೇವಾನಂದ ಶೆಟ್ಟಿ ಹಳನಾಡು, ನಾರಾಯಣ ನಾಯಕ್ ನೇರಳಕಟ್ಟೆ, ವೇದಮೂರ್ತಿ ಶ್ರೀ ಶ್ರೀಧರ ಅಡಿಗರು ಹಾಲಕ್ಕಿ, ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!