Sunday, September 8, 2024

ಹಿಂದೂಗಳ ವಿರುದ್ಧ ದ್ವೇಷ ರಾಜಕಾರಣ ಮಾಡುವುದೇ ಕಾಂಗ್ರೆಸ್ ಸರ್ಕಾರದ ಆಡಳಿತ ಧ್ಯೇಯ : ಬಿಜೆಪಿ ಆಕ್ರೋಶ   

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : 31 ವರ್ಷಗಳ ಬಳಿಕೆ ಹುಬ್ಬಳ್ಳಿಯಲ್ಲಿ ಇಬ್ಬರು ಕರ ಸೇವಕರನ್ನು ಬಂಧಿಸಿರುವುದಕ್ಕೆ ವಿರೋಧ ಪಕ್ಷ ಬಿಜೆಪಿ, ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ.

“ವಿನಾಶಕಾಲೆ ವಿಪರೀತ ದುರ್ಬುದ್ಧಿ” ಹಿಂದೂಗಳ ವಿರುದ್ಧ ದ್ವೇಷ ರಾಜಕಾರಣ ಮಾಡುವುದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಧ್ಯೇಯ ಎಂದು ಹರಿಹಾಯ್ದಿದೆ.

ಹಾಡುಹಗಲೇ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಜಿಹಾದಿಗಳಿಗೆ ಅಮಾಯಕರು, ಬ್ರದರ್ಸ್‌ಗಳು ಎಂಬ ಪಟ್ಟ ಕಟ್ಟುವ ಕಾಂಗ್ರೆಸ್, ಈಗ 31 ವರ್ಷಗಳ ಹಿಂದಿನ ಪ್ರಕರಣದ ತನಿಖೆಯನ್ನು ಪುನರಾರಂಭಿಸಿ, ಬಂಧಿಸುತ್ತಿರುವುದು ಕಾಂಗ್ರೆಸ್‌ನ ಹಿಂದೂ ವಿರೋಧಿ ರಾಜಕಾರಣದ ಸುಸ್ಪಷ್ಟ ನಿದರ್ಶನ ಎಂದು ಟೀಕೆ ಮಾಡಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದನ್ನು ಸಹಿಸದ ಕಾಂಗ್ರೆಸ್, ಹಿಂದೂಗಳ ವಿರುದ್ಧ ಇನ್ನಿಲ್ಲದ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!