Sunday, September 8, 2024

ಜ.6:ನಡೂರು ಗ್ರಾವಿಟಿ  ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಬ್ರಹ್ಮಾವರ: ಮಂದಾರ್ತಿ ರತ್ನಶೀಲ  ಎಜ್ಯುಕೇಶನ್ ಟ್ರಸ್ಟ್ ಇವರ ನೇತ್ರತ್ವದಲ್ಲಿ ನಡೆಯುತ್ತಿರುವ ಗ್ರಾವಿಟಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡ ಜ.6ರಂದು ಸಂಜೆ4.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಟ್ರಸ್ಟ್ ಅಧ್ಯಕ್ಷ  ಎಚ್.ಮನೋಹರ ಹೆಗ್ಡೆ ಹೇಳಿದ್ದಾರೆ.

ಅವರು ಗುರುವಾರ ಬ್ರಹ್ಮಾವರದ ಗಜಾನನ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಸುಪ್ರೀಂಕೋರ್ಟ್ ನ ಮಾಜಿ  ನ್ಯಾಯಧೀಶ ನಿಟ್ಟೆ ಸಂತೋಷ ಹೆಗ್ಡೆ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಗಿಗಳಾಗಿಬೆಂಗಳುರು ಬಿಬಿಎಂಸಿ ಅಡಿಷನಲ್ ಕಮಿಷನರ್ ಅಜಿತ್ ಕುಮಾರ್ ಹೆಗ್ಡೆ, ಡಿಡಿಪಿಐ ಕೆ.ಗಣಪತಿ, ಮಂದಾರ್ತಿ  ವ್ಯ.ಸೇ.ಸ.ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್,ರಾಘವ ಶೆಟ್ಟಿ, ಡಾವಿರುಪಾಕ್ಷ ದೇವರುಮನೆ, ಗ್ರಾ.ಪಂ. ಅಧ್ಯಕ್ಷ ಜಲಂಧರ ಶೆಟ್ಟಿ ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಪಾವನ ಎo. ಹೆಗ್ಡೆ, ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!