Sunday, September 8, 2024

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ: ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ನಾರಾಯಣ ಬೀಜಾಡಿ ಆಯ್ಕೆ

ಕುಂದಾಪುರ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ರಿ) ಸಿ.ಐ.ಟಿಯು ಸಂಯೋಜಿತ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ನಾರಾಯಣ ಬೀಜಾಡಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಉಡುಪಿ ಜಿಲ್ಲೆ ಘಟಕದಲ್ಲಿ ತಾನು ಸೇವೆಗೆ ಸೇರಿದಂದಿನಿಂದ ಸಕ್ರಿಯವಾಗಿದ್ದು ನಂತರದ ತಾಲೂಕು ಪದಾಧಿಕಾರಿಯಾಗಿ ಕುಂದಾಪುರ ತಾಲೂಕಿನ ಘಟಕದ ಅಧ್ಯಕ್ಷರಾಗಿ ಸಂಘಟನೆಯನ್ನು ಮುಂದುವರೆಸಿಕೊಂಡು ಕಳೆದ ಹತ್ತು ವರ್ಷಗಳಿಂದ ಉಡುಪಿ ಜಿಲ್ಲಾ ಘಟಕದ ಚುಕ್ಕಾಣಿಯನ್ನು ಹಿಡಿದು ಸಂಘಟನೆಯನ್ನು ಸಮರ್ಥವಾಗಿ ನಡೆಸಿಕೊಂಡು ಬಂದು ಗ್ರಾಮ ಪಂಚಾಯತ್ ನೌಕರರ ಬೇಡಿಕೆಯನ್ನು ರಾಜ್ಯಮಟ್ಟದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರದ ಹಂತಕ್ಕೆ ತಲುಪಿಸಿ ಇಲಾಖಾಧಿಕಾರಿಗಳು ಮತ್ತು ಸರ್ಕಾರದ ಸಮನ್ವಯ ಸಾಧಿಸಿಕೊಂಡು ಬಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!