spot_img
Tuesday, April 14, 2026
spot_img

ಕಾರ್ಕಡದಲ್ಲಿ ಕಲಾವಿದರಿಗೆ ಸನ್ಮಾನ

ಕೋಟ: ಕಲೆ ಸಾಹಿತ್ಯ ಬದುಕಿನ ಜೀವಾಳ. ಧಾರ್ಮಿಕ ಆರಾಧನೆಯಷ್ಟೇ ಕಲಾರಾಧನೆಯು ಮುಖ್ಯ. ಹರಕೆ ಬಯಲಾಟಗಳ ಮೂಲಕ ಭಗವತ್ ಕೃಪೆಯನ್ನು ಹೊಂದುವ ಸನಾತನ ಸಂಸ್ಕೃತಿ ನಮ್ಮದಾಗಿದೆ. ಕಲೆ ಕಲಾವಿದರನ್ನು ಗೌರವಿಸುವ ಮೂಲಕ ನಮ್ಮ ಸಾಂಸ್ಕೃತಿಕ ಜಗತ್ತು ಜೀವಂತವಾಗಿಡುವಲ್ಲಿ ನಮ್ಮೆಲ್ಲರ ಹೊಣೆಗಾರಿಕೆ ಗುರುತರವಾದುದು ಎಂದು ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪಕುಮಾರ ಕಲ್ಕೂರ ಹೇಳಿದರು.

ಕಾರ್ಕಡ ಸುಬ್ರಾಯ ಹೊಳ್ಳ ಮತ್ತು ಜಲಜಾಕ್ಷಿ ಹೊಳ್ಳ ಕುಟುಂಬದ ಪೂರ್ವಜರ ಹರಕೆಯಾಟವಾಗಿ ಕಾರ್ಕಡದ ಮೂಲ ಮನೆ ’ಸದಾನಂದ’ ದಲ್ಲಿ ನಡೆದ ಕೋಟ ಅಮೃತೇಶ್ವರಿ ಮೇಳದ ಪ್ರದರ್ಶನ ಸಂದರ್ಭದ ಸನ್ಮಾನ ಕಾರ್ಯಕ್ರಮದಲ್ಲಿ ಕಲ್ಕೂರರು ಮಾತನಾಡಿದರು.

ಮೇಳದ ಹಿರಿಯ ಸ್ತ್ರೀವೇಷ ಕಲಾವಿದ ಮೊಳಹಳ್ಳಿ ಕೃಷ್ಣ ನಾಯಕ್ ಮತ್ತು ಎರಡನೇ ವೇಷಧಾರಿ ಕೋಟ ಸುರೇಶ್ ಅವರನ್ನು ಹೊಳ್ಳ ಕುಟುಂಬದ ಪರವಾಗಿ ಗೌರವ ಧನದೊಂದಿಗೆ ಸನ್ಮಾನಿಸಲಾಯಿತು. ಸ್ಥಳೀಯ ಯುವ ಪ್ರತಿಭೆ ಅಮೃತೇಶ್ವರಿ ಮೇಳದ ಸಂಗೀತಗಾರ ಚಂದ್ರಕಾಂತ್ ಅವರನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು.

ಕಲಾ ಸಾಹಿತಿ ಎಚ್. ಜನಾರ್ದನ ಹಂದೆ ಅಭಿನಂದನೆಯ ಮಾತುಗಳನ್ನಾಡಿದರು. ಗೆಳೆಯರ ಬಳಗದ ಅಧ್ಯಕ್ಷ ತಾರಾನಾಥ ಹೊಳ್ಳ, ಕಲಾ ಸಂಘಟಕ ವಿಶ್ವೇಶ್ವರ ಹೊಳ್ಳ, ಕುಟುಂಬದ ಸದಸ್ಯರಾದ ಮಲ್ಲಿಕ ಹೊಳ್ಳ, ಕಾತ್ಯಾಯಿನಿ ಸದಾನಂದ ಹೊಳ್ಳ, ಸುಧೀಂದ್ರ ಹೊಳ್ಳ, ಇಂದಿರಾ ಹೊಳ್ಳ, ರವೀಂದ್ರ ಹೊಳ್ಳ, ಲಲನ ಹೊಳ್ಳ, ಪವನ ಹೊಳ್ಳ, ಚೇತನಾ ರಾಘವೇಂದ್ರ ರಾವ್, ಅನುಷ, ಮನಿಷ ಉಪಸ್ಥಿತರಿದ್ದರು.

ಯಕ್ಷ ಕಲಾವಿದ, ಉಪನ್ಯಾಸಕ ಸುಜಯೀಂದ್ರ ಹಂದೆ ಎಚ್. ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!