spot_img
Monday, April 6, 2026
spot_img

ರಾಮ ಮಂದಿರ ಲೋಕಾರ್ಪಣೆ : ರಾಮನ ಬಾಲ ಮೂರ್ತಿ ಗರ್ಭಗುಡಿಯೊಳಗೆ ಪ್ರತಿಷ್ಠಾಪನೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ !

ಜನಪ್ರತಿನಿಧಿ ವಾರ್ತೆ (ಅಯೋಧ್ಯೆ) :  ಜನವರಿ 22 ರಂದು ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮೊದಲು, ಅಯೋಧ್ಯೆಯ ರಾಮಮಂದಿರದ ಗರ್ಭಗೃಹದಲ್ಲಿ ಸ್ಥಾಪಿಸಲಾದ ರಾಮ ಲಲ್ಲಾನ ವಿಗ್ರಹದ ಮೊದಲ ಚಿತ್ರ ಹೊರಬಿದ್ದಿದ್ದು, ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸದ್ಯ ರಾಮಲಲ್ಲಾನ ವಿಗ್ರಹವನ್ನು ಬಿಳಿ ಬಟ್ಟೆಯಿಂದ ಮರೆ ಮಾಡಿ ಇಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.  

ಗುರುವಾರ ಮುಂಜಾನೆ, ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಪೂರ್ವಭಾವಿಯಾಗಿ ಆಚರಣೆಗಳ ಭಾಗವಾಗಿ ಗರ್ಭಗುಡಿಯೊಳಗೆ ರಾಮಲಲ್ಲಾ ವಿಗ್ರಹವನ್ನು ಸ್ಥಾಪಿನೆ ಮಾಡಲಾಗಿದೆ.

೫೧ ಇಂಚ್‌ ಎತ್ತರದ ರಾಮನ ಬಾಲ ಮೂರ್ತಿ ಕರ್ನಾಟಕದ ಮೈಸೂರು ಮೂಲದ ಅರುಣ್‌ ಯೋಗಿರಾಜ್‌ ಕೆತ್ತಿರುವ ಮೂರ್ತಿಯನ್ನು  ನಿನ್ನೆ (ಗುರುವಾರ) ನಸುಕಿನಲ್ಲಿ ಗರ್ಭಗುಡಿಯೊಳಗೆ ಕ್ರೇನ್‌ ಮೂಲಕ ತರಲಾಯಿತು.

ನಿನ್ನೆ(ಗುರುವಾರ) ಮಧ್ಯಾಹ್ನ, ರಾಮ್ ಲಲ್ಲಾ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸಲಾಯಿತು ಎಂದು ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಸಂಬಂಧಿಸಿದ ಅರ್ಚಕ ಅರುಣ್ ದೀಕ್ಷಿತ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿ, ಪ್ರಾರ್ಥನೆ, ಮಂತ್ರ ಪಠಣಗಳ ನಡುವೆ ಇದನ್ನು ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯೊಳಗೆ ಇರಿಸಲಾಯಿತು ಎಂದು ಹೇಳಿದೆ.

ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ಅವರು ‘ಪ್ರಧಾನ ಸಂಕಲ್ಪ’ವನ್ನು ನಡೆಸಿದರು ಎಂದು ದೀಕ್ಷಿತ್ ಹೇಳಿದರು.

ಭಗವಾನ್ ರಾಮನ ‘ಪ್ರತಿಷ್ಠೆ’ಯನ್ನು ಎಲ್ಲರ ಕಲ್ಯಾಣಕ್ಕಾಗಿ, ರಾಷ್ಟ್ರದ ಕಲ್ಯಾಣಕ್ಕಾಗಿ, ಮಾನವೀಯತೆಯ ಕಲ್ಯಾಣಕ್ಕಾಗಿ ಪ್ರಧಾನ ಸಂಕಲ್ಪ ಮಾಡಲಾಯಿತು.  ಇದಲ್ಲದೇ ಇತರೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ಬಆಚಾರ್ಯವರಣ ಹಾಗೂ ಇತ್ಯಾದಿ ಪೂರ್ವ ವಿಧಿವಿಧಾನಗಳನ್ನು ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!