Sunday, September 8, 2024

ಸುರಭಿ ರಿ.ಬೈಂದೂರು: ಸುರಭಿ “ಜೈಸಿರಿ” ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಸುರಭಿ ಕಲಾ ಸಂಸ್ಥೆ ಬೈಂದೂರು ಇದರ 24ನೇ ವರ್ಷದ ವಾರ್ಷಿಕ ಉತ್ಸವ ಮೂರು ದಿನಗಳ “ಸುರಭಿ ಜೈಸಿರಿ”ಹಾಗೂ ಹತ್ತನೇ ವರ್ಷದ “ಬಿಂದುಶ್ರೀ” ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿಯವರು ಬಿಡುಗಡೆಗೊಳಿಸಿ ಸುರಭಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಸಭಾಧ್ಯಕ್ಷತೆಯನ್ನು ಸುರಭಿ ಅಧ್ಯಕ್ಷ ನಾಗರಾಜ್ ಪಿ ಯಡ್ತರೆ ವಹಿಸಿದ್ದರು. ಉಪಾಧ್ಯಕ್ಷ ಹಾಗೂ ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಆನಂದ ಮದ್ದೋಡಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು ವೇದಿಕೆಯಲ್ಲಿ ಸುರಭಿಯ ನಿರ್ದೇಶಕ ಸುಧಾಕರ ಪಿ ಬೈಂದೂರು ಉಪಸ್ಥಿತರಿದ್ದು ಸ್ವಾಗತಿಸಿದರು. ಕಾರ್ಯದರ್ಶಿ ಭಾಸ್ಕರ್ ಬಾಡ ನಿರೂಪಿಸಿ ವಂದಿಸಿದರು.

ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!