Sunday, September 8, 2024

ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದಿಲ್ಲ. ಹಾಗೆಂದ ಮಾತ್ರಕ್ಕೆ ದುರ್ಬಲರೆಂದು ಅರ್ಥವಲ್ಲ : ರಾಹುಲ್‌ ಗಾಂಧಿ  

ಜನಪ್ರತಿನಿಧಿ ವಾರ್ತೆ (ಗುವಾಹಟಿ) : ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಗುವಾಹಟಿ ನಗರವನ್ನು ಪ್ರವೇಶಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ತಡೆ ಒಡ್ಡಿರುವ ಬೆನ್ನಲ್ಲೇ, ಜನರ ಗುಂಪನ್ನು ಪ್ರಚೋದಿಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಂದು(ಮಂಗಳವಾರ) ಅಸ್ಸಾಂನಲ್ಲಿ ಭಾರತ್ ಜೋಡೊ ನ್ಯಾಯ್ ಯಾತ್ರೆಗೆ ಮರು ಚಾಲನೆ ನೀಡಿದ ನಂತರ, ಗುವಾಹಟಿ ನಗರವನ್ನು ಪ್ರವೇಶಿಸಲು ಮುಂದಾದ ರಾಹುಲ್ ಗಾಂಧಿ ಹಾಗೂ ಸುಮಾರು 5,000 ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಈ ಬೆನ್ನಲ್ಲೇ ಪೊಲೀಸರೊಂದಿಗೆ ಘರ್ಷಣೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸ್ ತಡೆಗೋಡೆಗಳನ್ನು ಕಿತ್ತೆಸೆದಿದ್ದಾರೆ. ಹೀಗಾಗಿ ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಇದಕ್ಕೂ ಮುಂಚಿತವಾಗಿ, ಗುವಾಹಟಿಯ ಗಡಿಯಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮ ಪಕ್ಷದ ಕಾರ್ಯಕರ್ತರು ನಿಯಮಗಳನ್ನು ಮುರಿಯುವುದಿಲ್ಲ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದಿಲ್ಲ. ಹಾಗೆಂದ ಮಾತ್ರಕ್ಕೆ ನಾವು ದುರ್ಬಲರು ಎಂದು ಅರ್ಥವಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಹೇಳಿಕೆಯ ಬೆನ್ನಿಗೇ, ಜನರ ಗುಂಪನ್ನು ಪ್ರಚೋದಿಸಿರುವ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!