spot_img
Wednesday, March 4, 2026
spot_img

ಹೊಳಪು ಕಾರ್ಯಕ್ರಮದ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣದತ್ತ ದಿಟ್ಟ ಹೆಜ್ಜೆ- ಎ ಕಿರಣ್ ಕೊಡ್ಗಿ

ಕೋಟ : ಹೊಳಪು ಕಾರ್ಯಕ್ರಮವು ಎಲ್ಲ ಜನಪ್ರತಿನಿಧಿಗಳನ್ನು ಒಂದೇ ಸೂರಿನಡಿಯಲ್ಲಿ ಒಟ್ಟುಗೂಡಿಸಿ ನಾವೆಲ್ಲರೂ ಒಂದೇ ಎಂದು ಸಾರುವ ಕಾರ್ಯಕ್ರಮ. ಇಂತಹ ವಿಶಿಷ್ಠವಾದ ಕಾರ್ಯಕ್ರಮದ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆ ಇನ್ನಷ್ಟು ಸಬಲೀಕರಣದತ್ತ ಹೆಜ್ಜೆಯನ್ನಿಡಲು ಸಾಧ್ಯ ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ ಕಿರಣ್ ಕೊಡ್ಗಿ‌ಅವರು ಹೇಳಿದರು.

ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಅವರ ಆಶ್ರಯದಲ್ಲಿ ನಡೆಯುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ ಹೊಳಪು-2024 ( ಗ್ರಾಮ ಸರಕಾರದ ದಿಬ್ಬಣ) ಕಾರ್ಯಕ್ರಮದ ಟ್ರೋಫಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಸಂಚಾಲಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಹೊಳಪು ಕಾರ್ಯಕ್ರಮವನ್ನು ಪಂಚಾಯತ್ ಹಬ್ಬ ಎನ್ನುವ ರೀತಿಯಲ್ಲಿ ಸಂಭ್ರಮಿಸುವ, ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕೋರಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ,ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ, ಸ್ಥಳೀಯ ಪಂಚಾಯತ್ ಜನ ಪ್ರತಿನಿಧಿಗಳು, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು ಮತ್ತಿತ್ತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ನಿರೂಪಿಸಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ಪ್ರಸ್ತಾಪಿಸಿ, ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ರವೀಂದ್ರ ರಾವ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!