Sunday, September 8, 2024

ಫೆ.10ರಂದು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಪದಪ್ರದಾನ

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ, ಗೌರವಾರ್ಪಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಫೆಬ್ರವರಿ 10 ಶನಿವಾರ ಸಂಜೆ 4.30ಕ್ಕೆ ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತಾಶ್ವ ಆರ್.ಕುಂದರ್ ಬಾಳಿಕೆರೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬೈ ಇದರ ಗೌರವಾಧ್ಯಕ್ಷ ಸುರೇಶ ಆರ್ ಕಾಂಚನ್, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬೈ ಇದರ ಅಧ್ಯಕ್ಷ ರಾಜು ಮೆಂಡನ್ ವಂಡ್ಸೆ, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸ್ಥಾಪಕಧ್ಯಕ್ಷರು, ಮೊಗವೀರ ಮಹಾಜನ ಸೇವಾ ಸಂಘದ ಬಗ್ವಾಡಿ ಹೋಬಳಿ ಶಾಖಾಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ನಿಕಟಪೂರ್ವ ಅಧ್ಯಕ್ಷ ಶಿವರಾಮ ಕೆ.ಎಮ್., ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬೈ ಗೌರವ ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್, ಹೆಮ್ಮಾಡಿ ಘಟಕದ ನಿಕಟಪೂರ್ವ ಅಧ್ಯಕ್ಷರು, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಶಾಖಾ ಕಾರ್ಯದರ್ಶಿ ಪ್ರಭಾಕರ ಎನ್.ಎಮ್.ಸೇನಾಪುರ, ಜಿಲ್ಲಾ ಘಟಕದ ನಿಯೋಜಿತ ಅಧ್ಯಕ್ಷ ಜಯಂತ್ ಅಮೀನ್ ಕೋಡಿ, ನಿಯೋಜಿತ ಪ್ರಧಾನ ಕಾರ್ಯದರ್ಶಿ ರವೀಶ್ ಎಸ್.ಕೊರವಡಿ, ಹೆಮ್ಮಾಡಿ ಘಟಕದ ಗೌರವಾಧ್ಯಕ್ಷ ಉಮೇಶ ಬಡಾಕೆರೆ, ಬಗ್ವಾಡಿ ಹೋಬಳಿ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ.ಚಂದನ್ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪೋಕಸ್ ಡ್ಯಾನ್ಸ್ ಅಕಾಡೆಮಿ ತಲ್ಲೂರು ಇವರಿಂದ ಕಲಾ ವೈಭವ ನಡೆಯಲಿದೆ ಎಂದು ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತಾಶ್ವ ಆರ್.ಕುಂದರ್ ಬಾಳಿಕೆರೆ, ನಿಯೋಜಿತ ಅಧ್ಯಕ್ಷ ದಿನೇಶ ಬಿ.ಕಾಂಚನ್, ಕಾರ್ಯದರ್ಶಿ ಪ್ರವೀಣ್ ಗಂಗೊಳ್ಳಿ, ನಿಯೋಜಿತ ಕಾರ್ಯದರ್ಶಿ ಜಗದೀಶ ಎಮ್.ನೆಂಪು, ನಿಯೋಜಿತ ಕೋಶಾಧಿಕಾರಿ ವಿಜಯ ಪಿ.ಕಾಂಚನ್ ನಾಡ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!