Sunday, September 8, 2024

ರಾಜ್ಯಸಭೆ : ಫೆ.15ರ ವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ !

ಜನಪ್ರತಿನಿಧಿ (ನವ ದೆಹಲಿ) : ವಿಧಾನಸಭೆಯಿಂದ ರಾಜ್ಯಸಭೆಯ 4 ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿ 3 ದಿನಗಳು ಕಳೆದಿದ್ದರೂ ಇದುವರೆಗೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಈಗಾಗಲೇ ಚುನಾವಣೆ ಅಧಿಸೂಚನೆ ಹೊರಬಿದ್ದಿದ್ದು, ಫೆ.15ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.

ನಾಮಪತ್ರಗಳ ಪರಿಶೀಲನೆ ಫೆ.16ರಂದು ನಡೆಯಲಿದ್ದು, ಫೆ.20ರ ವರೆಗೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದುಕೊಳ್ಳಲು ಅವಕಾಶ ಇರಲಿದೆ.

ರಾಜ್ಯಸಭೆಗೆ ಮೂವರನ್ನು ಆಯ್ಕೆ ಮಾಡಲು ಬೇಕಾದ 136 ಸದಸ್ಯರನ್ನು ವಿಧಾನಸಭೆಯಲ್ಲಿ ಹೊಂದಿರುವ ಕಾಂಗ್ರೆಸ್‌ ಕೂಡ ಇದುವರೆಗೆ ತನ್ನ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿಲ್ಲ ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!