Sunday, September 8, 2024

2024-2025ನೇ ಸಾಲಿನ ರಾಜ್ಯ ಬಜೆಟ್ : ಪುತ್ತೂರು ಪಶು ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಹೈನುಗಾರಿಕಾ ಉನ್ನತಿಗೆ ಮಹತ್ವ ನೀಡಿದ್ದು, ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಗಾಣಿಕೆ, ಹೈನುಗಾರಿಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

ಮಾತ್ರವಲ್ಲದೇ, ರಾಜ್ಯದ ಆಯ್ದ ೨೦ ತಾಲೂಕುಗಳಲ್ಲಿ ಪಶು ಆಸ್ಪತ್ರೆಗಳನ್ನು ಪಾಲಿಕ್ಲೀನಿಕ್‌ ಗಳನ್ನಾಗಿ  ಮೇಲ್ದರ್ಜೇರಿಸಲು ಹತ್ತು ಕೋಟಿ ರೂ ಅನುದಾನ ನೀಡಲಾಗುವುದು ಹಾಗೂ ದುಸ್ಥಿತಿಯಲ್ಲಿರುವ ಇನ್ನೂರು ಪಶು ವೈದ್ಯಕೀಯ ಕಟ್ಟಡಗಳಿಗೆ ನೂರು ಕೂಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನು, ಪುತ್ತೂರು ಪಶು ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ ತೆಗೆದುಕೊಳ್ಳುವುದಾಗಿ ಬಜೆಟ್‌ ಮಂಡನೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!