Sunday, September 8, 2024

ಕುಂದಾಪುರದ ‘ಅಜಂತಾ ಪ್ರೆಸ್’ ಮಾಲಕ ಅನಂತಕೃಷ್ಣ ಕೊಡ್ಗಿ ನಿಧನ

ಕುಂದಾಪುರ, ಫೆ.೧೭: ಕುಂದಾಪುರದ ಉದ್ಯಮಿ, “ಅಜಂತಾ ಪ್ರಿಂಟರ್‍ಸ್” ಮಾಲಕರಾದ ಸಾಮಾಜಿಕ ಧುರೀಣ ಎ. ಅನಂತಕೃಷ್ಣ ಕೊಡ್ಗಿಯವರು (72) ದಿನಾಂಕ 17 ರಂದು ಶನಿವಾರ ಬೆಳಿಗ್ಗೆ ನಿಧನರಾದರು.

ಹಿರಿಯ ಸಮಾಜ ಸೇವಕರಾಗಿದ್ದು, ಕುಂದಾಪುರದ ಲಯನ್ಸ್ ಕ್ಲಬ್, ಬೋರ್ಡ್ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ ಮುಂತಾದ ಸಂಘಟನೆಗಳಲ್ಲಿ ಕಾರ್ಯದರ್ಶಿಯಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ಕುಂದಾಪುರ ತಾಲೂಕು ಬಿಜೆಪಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದವರು. ಈಗ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಕ್ರೀಯಾಶೀಲರಾಗಿದ್ದರು.
ತಮ್ಮ ನೇರ ನುಡಿ, ಮಾನವೀಯ ಸಾತ್ವಿಕ ಗುಣಗಳಿಂದ ಸಮಾಜದಲ್ಲಿ ಗೌರವಕ್ಕೆ ಪಾತ್ರರಾದವರು.

ಇವರು ಪತ್ನಿ ಓರ್ವ ಪುತ್ರನನ್ನು ಅಗಲಿದ್ದಾರೆ.

ಇವರು ಮಾಜಿ ಶಾಸಕ, ಅಮಾಸೆಬೈಲು ದಿ. ಎ.ಜಿ.ಕೊಡ್ಗಿಯವರ ಸಹೋದರ ಹಾಗೂ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರ ಚಿಕ್ಕಪ್ಪ. ಹಲವಾರು ಮಂದಿ ಗಣ್ಯರು ಇವರ ನಿಧನಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ಅಮಾಸೆಬೈಲು, ಮಚ್ಚಟ್ಟು ಮೂಲ ಗೃಹದಲ್ಲಿ ನೆರವೇರಿಸಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!