spot_img
Monday, December 15, 2025
spot_img

ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷರಾಗಿ ಬೀಜಾಡಿ ಸುರೇಶ್ ಶೆಟ್ಟಿ ನೇಮಕ

ಕುಂದಾಪುರ: ಉಡುಪಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಮಂಡಲಗಳ ನೂತನ ಅಧ್ಯಕ್ಷರ ಆಯ್ಕೆ ನಡೆದಿದ್ದು, ಕುಂದಾಪುರ ಮಂಡಲದ ಅಧ್ಯಕ್ಷರಾಗಿ ಬೀಜಾಡಿ ಸುರೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕಿಶೋರ್ ಕುಮಾರ್ ಕುಂದಾಪುರ ಅವರು ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಿ ಆದೇಶ ನೀಡಿದ್ದಾರೆ.

ಸುರೇಶ ಶೆಟ್ಟಿಯವರು ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಪತ್ನಿ ಶ್ರೀಲತಾ ಶೆಟ್ಟಿ ಹಿಂದಿನ ಅವಧಿಯಲ್ಲಿ ಕೋಟೇಶ್ವರ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!