spot_img
Thursday, March 19, 2026
spot_img

ಮೋದಿ ಸರ್ಕರದ ಆರ್ಥಿಕತೆ ನಿರ್ವಹಣೆಯ ವೈಫಲ್ಯವನ್ನು ಟೀಕಿಸಿ ಜೈರಾಮ್ ರಮೇಶ್‌ ಗಂಭೀರ ಆರೋಪ !

ಜನಪ್ರತಿನಿಧಿ (ನವ ದೆಹಲಿ) : ಆರ್ಥಿಕತೆ ಮೋದಿ ಸರ್ಕಾರದ ಸೂಕ್ತವಲ್ಲದ ನಿರ್ವಹಣೆಯ ಪರಿಣಾಮದಿಂದಾಗಿ 20 ವರ್ಷ ಹಿಂದಕ್ಕೆ ಹೋಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕತೆ ನಿರ್ವಹಣೆಯ ವೈಫಲ್ಯದ ಬಗ್ಗೆ  ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್,  ಆರ್ಥಿಕ ಬೆಳವಣಿಗೆ ಅಂದರೆ ಕೃಷಿಯಿಂದ ಉದ್ಯಮ, ಸೇವೆಗಳಿಗೆ ಉದ್ಯೋಗದ ವೈವಿಧ್ಯೀಕರಣ ಎಂದು ಕಾಂಗ್ರೆಸ್ ಹೇಳಿದ್ದು, ಈ ನಿಟ್ಟಿನಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿ ಸಾಧಿಸಿದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಂದಕ್ಕೆ ಕೊಂಡೊಯ್ದಿದೆ ಎಂದು ಆರೋಪಿಸಿದ್ದಾರೆ.

2004-05 ಹಾಗೂ 2017-18 ನಡುವೆ ಕೃಷಿ ಸಂಬಂಧಿತ ನೌಕರರು 6.7 ಕೋಟಿಯಷ್ಟು ಕಡಿಮೆಯಾಗಿದ್ದಾರೆ, ಕಡಿಮೆ ದೈನಂದಿನ ವೇತನ ಪಡೆಯುವ ಬದಲಿಗೆ, ಹೆಚ್ಚು ವೇತನ ನೀಡುವ ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳ ಉದ್ಯೋಗಗಳಿಗೆ ಸೇರಿದ್ದರು ಎಂದವರು ಹೇಳಿದ್ದಾರೆ.

ಇದು ಐತಿಹಾಸಿಕ ಸಾಧನೆಯಾಗಿ, ಭಾರತ ಸಾಧಿಸಿದ ಮಧ್ಯಮ ಆದಾಯ ದೇಶಗಳ ಮೈಲಿಗಲ್ಲಾಗಿತ್ತು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಈ ಪ್ರಗತಿಯನ್ನು ಡಾ. ಮನಮೋಹನ್ ಸಿಂಗ್ ಅವಧಿಯಲ್ಲಿ ಸಾಧಿಸಲಾಗಿತ್ತು. ಇದನ್ನು ಮೋದಿ ಸರ್ಕಾರ 3 ವರ್ಷಗಳ ಅನ್ಯಾಯ ಕಾಲದಲ್ಲಿ ಬುಡಮೇಲು ಮಾಡಿತ್ತು ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

2018-19 ರಿಂದ ಕೃಷಿಕ ನೌಕರರ ಸಂಖ್ಯೆ 6 ಕೋಟಿಗಳಿಗೆ ಏರಿಕೆಯಾಗಿದ್ದು, ಇದು ಕೋವಿಡ್ ಪೂರ್ವದಲ್ಲಿದ್ದ ಸಂಖ್ಯೆಗೆ ಮರಳಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಭಾರತವನ್ನು ಸಮೃದ್ಧಿಯ ಪಥದಲ್ಲಿ ನಡೆಸುವುದಕ್ಕಿಂತ ಪ್ರಧಾನಿ ಅವರ ಅನಾಹುತಕಾರಿ ನಿರ್ವಹಣೆ ನಮ್ಮ ದೇಶದ ಆರ್ಥಿಕ ರೂಪಾಂತರವನ್ನು 20 ವರ್ಷಗಳ ಹಿಂದಕ್ಕೆ ಕೊಂಡೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಆರ್ಥಿಕತೆಯನ್ನು ನಿಭಾಯಿಸುವ ವಿಷಯವಾಗಿ ಸರ್ಕಾರದ ಮೇಲೆ ದಾಳಿ ಮಾಡುತ್ತಿದೆ ಮತ್ತು “ಹೆಚ್ಚುತ್ತಿರುವ” ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!