Sunday, September 8, 2024

ಜಾತಿ ಗಣತಿ : ಅಧಿಕೃತವಾಗಿ ರಾಜ್ಯ ಸರ್ಕಾರಕ್ಕೆ ವರದಿ ಇಂದು ಸಲ್ಲಿಕೆ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಹಿಂದುಳಿದ ವರ್ಗಗಳ ಆಯೋಗ ೨೦೧೫ರಲ್ಲಿ ನಡೆಸಿದ್ದ ʼಸಾಮಾಜಿಕ ಶೈಕ್ಷಣಿಕ ಸಮೀಕ್ಚೆ (ಜಾತಿವಾರು ಜನಗಣತಿ) ವರದಿಯನ್ನು ಇಂದು (ಗುರುವಾರ) ಅಧಿಕೃತವಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

೧೫೮.೪೭ ರೂ. ಕೋಟಿ ವೆಚ್ಚದಲ್ಲಿ ಎಚ್.‌ ಕಾಂತರಾಜ್‌ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಯನ್ನುಯ ಅರ್ಥೈಸಿಕೊಳ್ಳಲು ೨೦೧೫ರಲ್ಲಿ ಸಮೀಕ್ಷೆ ಮಾಡಿತ್ತು. ಆದರೆ, ಆಯೋಗದ ಅವಧಿ ಮುಕ್ತಾಯ ಆಗುವ ಸಂದರ್ಭದಲ್ಲಿ ಅಧಿಕೃತವಾಗಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

ವಿವಿಧ ವಿಷಯಗಳಿಗೆ ಸಂಬಂಧಿಸಿ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್‌ ಹೆಗ್ಡೆ ಅವರ ನೇತೃತ್ವದಲ್ಲಿ ಹಲವು ಟಿಪ್ಪಣಿಗಳೊಂದಿಗೆ ೨೦೧೫ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಲಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!