spot_img
Wednesday, March 18, 2026
spot_img

ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ
ಉಡುಪಿ ತಂಡಕ್ಕೆ ವಿನ್ನರ್ಸ್‌- ಕುಂದಾಪುರ ತಂಡಕ್ಕೆ ರನ್ನರ್ಸ್‌ ಪ್ರಶಸ್ತಿ

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾಗಿರುವ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ರಜತ ಮಹೋತ್ಸವದ ಪ್ರಯುಕ್ತ ಮಂಗಳವಾರ ಹೆಜಮಾಡಿಯ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ತಂಡ ಪ್ರಶಸ್ತಿ ಗೆದ್ದುಕೊಂಡಿದೆ.

ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಹಾಗೂ ಬ್ರಹ್ಮಾವರ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಉಡುಪಿ ಮತ್ತು ಕುಂದಾಪುರ ತಂಡಗಳು ಅತೀ ಹೆಚ್ಚು ಅಂಕಗಳನ್ನು ಗಳಿಸಿ ಫೈನಲ್ ಪ್ರವೇಶಿಸಿದವು.

ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಉಡುಪಿ ತಂಡವು ಬ್ಯಾಟಿಂಗ್ ಆರಿಸಿ ಕೊಂಡಿತು. ಒಟ್ಟು ಐದು ಓವರ್‌ಗಳಲ್ಲಿ 37ರನ್ ಕಳೆ ಹಾಕಿದ ಉಡುಪಿ ತಂಡವು ಎದುರಾಳಿ ಕುಂದಾಪುರ ತಂಡಕ್ಕೆ 38ರನ್‌ಗಳ ಗುರಿ ನೀಡಿತು. ತೀವ್ರ ಸೆಣಸಾಟದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್‌ಗಳಲ್ಲಿ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಕುಂದಾಪುರ ತಂಡವು ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡಿತು.

ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಉಡುಪಿ ತಂಡದ ಯತೀಶ್ ತಿಂಗಳಾಯ, ಉತ್ತಮ ದಾಂಡಿಗ ಪ್ರಶಸ್ತಿಯನ್ನು ಕುಂದಾಪುರ ತಂಡದ ಸಂತೋಷ್ ಕುಂದೇಶ್ವರ, ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಕುಂದಾಪುರ ತಂಡದ ಹರೀಶ್ ಕುಂದಾಪುರ, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಉಡುಪಿ ತಂಡದ ರಾಘವೇಂದ್ರ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!