spot_img
Friday, March 21, 2025
spot_img

ತೆರವಾದ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ನೇಮಕಾತಿಗೆ ಸಮಿತಿ ಸಭೆ : ಹೊಸ ಚುನಾವಣಾ ಆಯುಕ್ತರ ನೇಮಕ !

ನವದೆಹಲಿ: ಇತ್ತೀಚಿನ ನಿವೃತ್ತಿ ಮತ್ತು ರಾಜೀನಾಮೆಗಳಿಂದ ತೆರವಾದ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ನೇಮಕಾತಿಯ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಸಭೆಯನ್ನು ಮಾರ್ಚ್ 14 ರಂದು ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮಾಹಿತಿ ನೀಡಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತಿ ಮತ್ತು ರಾಜೀನಾಮೆಗಳಿಂದ ತೆರವಾದ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ನೇಮಕಾತಿಗಳ ಬಗ್ಗೆ ಚರ್ಚಿಸಿ ಅಂತಿಮ ಅನುಮೋದನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಶುಕ್ರವಾರ ರಾಜೀನಾಮೆ ನೀಡಿದ ಅರುಣ್ ಗೋಯೆಲ್ ಹಾಗೂ ಫೆಬ್ರವರಿ 14 ರಂದು ನಿವೃತ್ತರಾದ ಅನುಪ್ ಚಂದ್ರ ಪಾಂಡೆ ನಂತರ ಕೇಂದ್ರ ಚುನಾವಣಾ ಆಯೋಗ ಈಗ ಒಬ್ಬ ಮುಖ್ಯಸ್ಥರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯುಕ್ತರ ಹುದ್ದೆಗಳ ನೇಮಕಾತಿಯ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಸಭೆಯನ್ನು ಕರೆದಿದೆ ಎಂದು ಮಾಹಿತಿ ಒದಗಿ ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಕೇಂದ್ರ ಸಚಿವರು ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸದಸ್ಯರಾಗಿದ್ದಾರೆ. ಸಮಿತಿಯಿಂದ ಶಿಫಾರಸುಗಳನ್ನು ಸ್ವೀಕರಿಸಿದ ನಂತರ, ಭಾರತದ ರಾಷ್ಟ್ರಪತಿಗಳು ಹೊಸ ಚುನಾವಣಾ ಆಯುಕ್ತರನ್ನು ನೇಮಿಸುತ್ತಾರೆ.

ಕಳೆದ ಶನಿವಾರ ಮಧ್ಯಾಹ್ನ ಒಬ್ಬ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸೂಚನೆಯನ್ನು ಆರಂಭದಲ್ಲಿ ಕಳುಹಿಸಲಾಗಿದೆ ಎಂದು ಬಹಿರಂಗಪಡಿಸಲಾಯಿತು, ಗೋಯೆಲ್ ಅವರ ರಾಜೀನಾಮೆಯನ್ನು ಸಂಜೆ ಔಪಚಾರಿಕವಾಗಿ ಘೋಷಿಸಲಾಯಿತು. ಸೋಮವಾರ ಸಂಜೆ ಇಬ್ಬರು ಚುನಾವಣಾ ಆಯುಕ್ತರ ಆಯ್ಕೆಗೆ ಪರಿಷ್ಕೃತ ಅಧಿಸೂಚನೆಯನ್ನು ಕಾನೂನು ಸಚಿವಾಲಯ ಹೊರಡಿಸಿದೆ.

ಪ್ರಸ್ತುತ, ಸಿಇಸಿ ರಾಜೀವ್ ಕುಮಾರ್ ಅವರು ಚುನಾವಣಾ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಏಕೈಕ ಸದಸ್ಯರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!