Sunday, September 8, 2024

ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಭೇಟಿ

ಗಂಗೊಳ್ಳಿ : ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಅವರು ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಸ್ಥಾನದಲ್ಲಿ ಮೊಕ್ಕಾಂ ಮಾಡಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಅವರು ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಭೋಜೆಗೌಡ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಜಿ.ವೇದವ್ಯಾಸ ಆಚಾರ್ಯ ಮತ್ತು ಎಚ್.ಗಣೇಶ ಕಾಮತ್ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್, ಡಾ.ಕಾಶೀನಾಥ ಪೈ, ಶಿಕ್ಷಕರಾದ ಶಶಿಶಂಕರ ಎಚ್.ಎಂ., ಡಾ.ಕಿಶೋರ್ ಕುಮಾರ್ ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!