Sunday, September 8, 2024

ಇಡೀ ದೇಶ ಹೊಸ ಬದಲಾವಣೆಯನ್ನು ಬಯಸುತ್ತಿದೆ : ಎಐಸಿಸಿ ಅಧ್ಯಕ್ಷ  ಖರ್ಗೆ

ಜನಪ್ರತಿನಿಧಿ (ನವ ದೆಹಲಿ) : ಇಡೀ ದೇಶವೇ ಒಂದು ಹೊಸ ಬದಲಾವಣೆಯನ್ನು ಬಯಸುತ್ತಿದೆ. ನಮ್ಮ ಪ್ರಣಾಳಿಕೆ ವಿವಿಧ ರಾಜ್ಯಗಳಲ್ಲಿ ವಿಸ್ತೃತವಾದ ಪ್ರಚಾರ ಸಿಗುತ್ತಿದೆ ಎನ್ನುವುದನ್ನು ಖಾತ್ರಿಪಡಿಸುವುಉ ನಮ್ಮ ಜವಾಬ್ದಾರಿಯಾಗಿದೆ. ದೇಶದ ಹಳ್ಳಿಗಳ ಮನೆಮನೆಗೂ ನಮ್ಮ ಭರವಸೆಗಳು ತಲುಪುವಂತೆ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದ್ದಾರೆ.

ಇಂದು (ಮಂಗಳವಾರ) ನಡೆದ ಸಿಡಬ್ಲ್ಯುಸಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಣಾಳಿಕೆಯಲ್ಲಿ ನಾವು ನೀಡುವ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್‌ ಬದ್ಧವಾಗಿದೆ. ಇದೇ ಕಾರಣಕ್ಕಾಗಿ ೧೯೨೬ರಿಂದ ಕಾಂಗ್ರೆಸ್‌ ಪ್ರಣಾಳಿಕೆಯನ್ನು ʼ ವಿಶ್ವಾಸ  ಹಾಗೂ ಬದ್ಧತೆಯ ದಾಖಲೆʼಯಾಗಿ ಪರಿಗಣಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಸಿಡಬ್ಲ್ಯುಸಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ನಾಯಕರಾದ ಕೆ.ಸಿ ವೇಣುಗೋಪಾಲ್‌, ಜೈರಾಮ್‌ ರಮೇಶ್‌, ಪ್ರಣಾಳಿಕೆಗೆ ಪಕ್ಷದ ಅಧ್ಯಕ್ಷ ಖರ್ಗೆ ಅವರು ಅನುಮೋದನೆ ನೀಡಿದ ಬಳಿಕ ಬಿಡುಗಡೆ ದಿನಾಂಕವನ್ನು ಘೋಷಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!