spot_img
Wednesday, April 1, 2026
spot_img

ಸೃಜನ ಎಸ್ .ಪಿ ಅವರಿಗೆ ಡಾ. ಶಿವರಾಮ ಕಾರಂತ ವಿಶೇಷ ಸಾಧಕ ಸ್ತ್ರೀ ಪುರಸ್ಕಾರ

ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕೊಡಮಾಡುವ ಡಾ|| ಶಿವರಾಮ ಕಾರಂತ ವಿಶೇಷ ಸಾಧಕ ಸ್ತ್ರೀ ಪುರಸ್ಕಾರಕ್ಕೆ ಕುಂದಾಪುರದ ವಿಶೇಷ ಚೇತನ ಯುವತಿ ಸೃಜನಾ ಎಸ್ ಪಿ ಅವರನ್ನು ಆಯ್ಕೆ ಮಾಡಲಾಗಿದೆ.

ಹುಟ್ಟು ಕಿವುಡುತನದೊಂದಿಗೆ ಮಾತು ಬಾರದ ದಿಟ್ಟ ಹುಡುಗಿಯೊಬ್ಬಳು ತನ್ನ ಅಹರ್ನಿಶಿ ಶ್ರಮದೊಂದಿಗೆ ತನ್ನ ಕನಸನ್ನು ಬೆನ್ನೇರಿಕೊಂಡು ಸಾಧನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಕ್ರಿಕೆಟ್ ಎಂದರೆ ಪ್ರಾಣಕ್ಕಿಂತಲೂ ಹೆಚ್ಚಾಗಿ ಪ್ರೀತಿಸುವ ಈಕೆ ಹರಿಯಾಣದಲ್ಲಿ ನಡೆಯಲಿರುವ ಟಿ-೧೦ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ ಆಗುವುದರ ಮೂಲಕ ವಿಶೇಷ ಚೇತನ ಮಕ್ಕಳಿಗೆಲ್ಲ ರೋಲ್ ಮಾಡಲ್ ಆಗುವುದರ ಮೂಲಕ ಪ್ರಯತ್ನಕ್ಕಿಂತ ದೊಡ್ಡದು ಯಾವುದು ಇಲ್ಲ ಎಂಬ ಸಾಧನೆಯ ಮೂಲಕ ಆಲ್ ಇಂಡಿಯಾ ಸ್ಪೋರ್ಟ್ಸ್ ಕೌನ್ಸಿಲ್ ಆಫ್ ದಿ ಡೆಫ್ ಆಯೋಜಿಸಿರುವ ಪ್ರಥಮ ರಾಷ್ಟ್ರ ಮಟ್ಟದ ಟಿ-10 ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅವರು ಕರ್ನಾಟಕ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ.

ಕುಂದಾಪುರದ ವಿಠಲವಾಡಿಯ ನಿವಾಸಿ ಸುಧಾಕರ ಪೂಜಾರಿ ಮತ್ತು ಸವಿತಾ ದಂಪತಿಯ ಏಕೈಕ ಪುತ್ರಿ ಯಾಗಿರುವ ಇವರು ಓದುವಿಕೆಯಲ್ಲಿ ಮುಂಚೂಣಿಯಲ್ಲಿದ್ದು ಕ್ರೀಡೆಯನ್ನು ಬದುಕಿನ ಅವಿಭಾಜ್ಯ ಅಂಗವೆಂದೇ ತಿಳಿದುಕೊಂಡು ಸಾಂಸ್ಕೃತಿಕ ಕ್ಷೇತದಲ್ಲಿ ಅಭಿನಯ, ನೃತ್ಯದ ಮೂಲಕ ಗುರುತಿಸಿಕೊಂಡಿದ್ದಲ್ಲದೇ ಚಿತ್ರಕಲೆ ಹಾಗೂ ಜಿಲ್ಲಾ ಮಟ್ಟದ ಶಾಟ್ ಪುಟ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ತನ್ನ ಬಹುಮುಖ ಪ್ರತಿಭೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುತ್ತಾರೆ. “ಮಾಯಾ ಜಿಂಕೆ” ನಾಟಕದ ಜಿಂಕೆ ಪಾತ್ರ ಇವರಿಗೆ ಉತ್ತಮ ಹೆಸರು ತಂದು ಕೊಟ್ಟಿತು. ೧ರಿಂದ 8 ನೇ ತರಗತಿಯ ತನಕ ಅಂಪಾರು ಮೂಡುಬಗೆ ವಾಗ್ಜ್ಯೋತಿ ವಿಶೇಷ ಶಾಲೆಯಲ್ಲಿ ಕಲಿಕೆಯ ನಂತರ 9 ಮತ್ತು 10 ತರಗತಿಯನ್ನು ಮೈಸೂರಿನ ಪುಟ್ಟಿ ವೀರಮ್ಮ ಶಾಲೆಯಲ್ಲಿ ಪೂರೈಸಿದ್ದಾರೆ. ಪ್ರತಿಯೊಂದರ ಬಗ್ಗೆ ಆಸಕ್ತಿಯಿಂದ ನೋಡುವ ಇವರು ಕಲಿಕೆ, ಚಿತ್ರಕಲೆ, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈವರೆಗೆ ಸುಮಾರು 55 ಮಿಕ್ಕಿ ಬಹುಮಾನ ಗಳಿಸಿದ್ದಾರೆ.

ಮಾರ್ಚ್ 30 ಸಂಜೆ 5 ಗಂಟೆಗೆ ರಂದು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!