Sunday, September 8, 2024

ನೇಜಾರು ಕೊಲೆ ಪ್ರಕರಣ : ಆರೋಪಿ ಪ್ರವೀಣ್‌ ಚೌಗುಲೆಗೆ ಮತ್ತೆ ಜಾಮೀನು ತಿರಸ್ಕರಿಸಿದ ಜಿಲ್ಲಾ ನ್ಯಾಯಾಲಯ

ಜನಪ್ರತಿನಿಧಿ (ಉಡುಪಿ) : ಜಿಲ್ಲೆಯ ನೇಜಾರುವಿನಲ್ಲಿ ಹಾಡುಹಗಲೇ ನಡೆದಿರುವ ನಾಲ್ಕು ಕೊಲೆ ಪ್ರಕರಣದ ಆರೋಪಿ  ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು  ಇಂಧೂ(ಶನಿವಾರ) ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಆದೇಶ ನೀಡಿದೆ.

ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿಯನ್ನು ಆರೋಪಿ ಪ್ರವೀಣ್ ಚೌಗುಲೆ  ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು.

ಈ ಬಗ್ಗೆ ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದಿದ್ದವು. ಎರಡು ಕಡೆಯ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಬಗ್ಗೆ ಅಂತಿಮ ಆದೇಶ ನೀಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!