Sunday, September 8, 2024

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಿ.ವೈ.ರಾಘವೇಂದ್ರ ಭೇಟಿ

ಕೊಲ್ಲೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಆರಂಭಕ್ಕೂ ಮುನ್ನ ಬಿ.ವೈ ರಾಘವೇಂದ್ರ ಕೊಲ್ಲೂರು ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ ಆಯಸ್ಸು ಆರೋಗ್ಯ ಕೊಟ್ಟು ದೇಶವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಅವರ ಕನಸಿಗೆ ವಿಶೇಷ ಶಕ್ತಿ ನೀಡುವಂತೆ ಹಾಗೂ ನನ್ನ ಲೋಕಸಭಾ ಅವಧಿಯಲ್ಲಿ ಜನಗಳ ಸೇವೆಯನ್ನು ಮಾಡಲು, ಅಭಿವೃದ್ಧಿ ಕಾರ್ಯಗಳನ್ನು ಶರವೇಗದಲ್ಲಿ ತಲುಪಿಸಲು ಇನ್ನಷ್ಟು ಬಲ ಕೊಡುವಂತೆ ಮತ್ತು ಭೀಕರ ಬರಗಾಲದಿಂದ ತತ್ತರಿಸಿರುವ ಈ ನಾಡಿನ ಸಕಲ ಜೀವ ರಾಶಿಗಳನ್ನು ಸಂರಕ್ಷಿಸುವಂತೆ ಭಕ್ತಿಯಿಂದ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ಮಂಡಲ ಅಧ್ಯಕ್ಷರಾದ ದೀಪಕ್ ಶೆಟ್ಟಿ, ಪ್ರಮುಖರಾದ ಪ್ರಿಯದರ್ಶಿನಿ, ವೆಂಕಟೇಶ್ ಕಿಣಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!