spot_img
Sunday, February 15, 2026
spot_img

ಕೋಣಿ: “ಮಾನಸ ಜ್ಯೋತಿ ವಿಶೇಷ ಶಾಲೆ”ಗೆ ಸೋಲಾರ್ ವಿದ್ಯುಚಕ್ತಿ ಕೊಡುಗೆ

ಕುಂದಾಪುರ: ಕೋಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾನಸ ಜ್ಯೋತಿ ವಿಶೇಷ ಶಾಲೆಗೆ ಸೋಲಾರ್ ವಿದ್ಯುಚಕ್ತಿ ಉಪಕರಣಗಳ ಕೊಡುಗೆ ನೀಡುವ ಮೂಲಕ ರೋಟರಿ ಕುಂದಾಪುರ ದಕ್ಷಿಣ ವಿಶೇಷ ಮಕ್ಕಳಿಗೆ ಅನುಕೂಲತೆ ಒದಗಿಸಿದೆ.

ರೋಟರಿ ಡಿಡಿ‌ಎಫ್ ಯೋಜನೆ ಮೂಲಕ ನೀಡಲಾದ ಈ ಕಾರ್ಯದಲ್ಲಿ ಸೆಲ್ಕೋ ಸೋಲಾರ್ ಕಂಪೆನಿ ಸಹಕರಿದ್ದು, ತ್ವರಿತವಾಗಿ ಯೋಜನೆ ಅನುಷ್ಠಾನಗೊಳಿಸಿದೆ.

ಮಾನಸ ಜ್ಯೋತಿ ಶಾಲಾ ವಠಾರದಲ್ಲಿ ನಡೆದ ಸಭೆಯಲ್ಲಿ ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ ಮಲ್ಯ ಯೋಜನೆಯ 1,25,000/- ರೂ. ನೆರವನ್ನು ಮಾನಸ ಜ್ಯೋತಿ ಟ್ರಸ್ಟ್ ಅಧ್ಯಕ್ಷ ಡಾ| ಬಿ.ವಿ.ಉಡುಪರಿಗೆ ಹಸ್ತಾಂತರಿಸಿದರು.

ದೀಪ ಬೆಳಗಿಸಿ ಸಮಾರಂಭ ಉದ್ಘಾಟಿಸಿದ ಡಾ| ಬಿ.ವಿ. ಉಡುಪ, ದಾನಿಗಳು ನೀಡುತ್ತಿರುವ ನೆರವು, ಶಾಲೆಯ ನಿರ್ವಾಹಕರ ನಿಸ್ವಾರ್ಥ ಸೇವೆ ಹಾಗೂ ವಿಶೇಷ ಶಾಲೆ ಮಾನವೀಯತೆಯ ದೃಷ್ಠಿಯಿಂದ ನಡೆಯುತ್ತಿರಲು ಕಾರಣವಾಗಿದೆ” ಎಂದರು. ಅಗತ್ಯವಾಗಿದ್ದ ಸೋಲಾರ್ ಶಕ್ತಿ ಯೋಜನೆ ಕಾರ್ಯಗತಗೊಳಿಸಿದ ರೋಟರಿ ಕುಂದಾಪುರ ದಕ್ಷಿಣಕ್ಕೆ ಅವರು ಅಭಿನಂದನೆ ಸಲ್ಲಿಸಿದರು.

ಸೆಲ್ಕೋ ಸೋಲಾರ್ ಕಂಪೆನಿ ಪರವಾಗಿ ಮಂಜುನಾಥ ಅವರನ್ನು ಗೌರವಿಸಲಾಯಿತು. ಯೋಜನೆ ಅನುಷ್ಠಾನಕ್ಕೆ ಸಹಕರಿಸಿದ ವಾಸುದೇವ ಕಾರಂತ, ರೋಟರಿ ದಕ್ಷಿಣದ ನಿಕಟಪೂರ್ವ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಮಾಹಿತಿ ನೀಡಿದರು.

ಮಾನಸ ಜ್ಯೋತಿ ಟ್ರಸ್ಟಿ ಕೆ. ಕೆ. ಕಾಂಚನ್ ನಿರೂಪಿಸಿದರು. ಟ್ರಸ್ಟಿ ಯು.ಎಸ್.ಶೆಣೈ, ರೋಟರಿ ಕುಂದಾಪುರ ದಕ್ಷಿಣದ ಸದಸ್ಯರಾದ ಮನೋಹರ ಭಟ್, ದೊ.ಮಾ. ಚಂದ್ರಶೇಖರ, ಮುರಳೀಧರ ಉಳ್ಳೂರು, ಮಾನಸ ಜ್ಯೋತಿ ನಿರ್ವಾಹಕರಾದ ಮಾರ್ಜೆ, ಶೋಭಾ ಮಧ್ಯಸ್ಥ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!