Sunday, September 8, 2024

ಲೋಕಸಭಾ ಚುನಾವಣೆ : ಪೌರತ್ವ ತಿದ್ದುಪಡಿ ಕಾಯ್ದೆ ರದ್ದು | ಪ್ರಣಾಳಿಕೆಯಲ್ಲಿ ಸಿಪಿಐ ಭರವಸೆ

ಜನಪ್ರತಿನಿಧಿ (ನವ ದೆಹಲಿ) : ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಭಾರತದ ಕಮ್ಯುನಿಷ್ಟ್‌ ಪಕ್ಷ (ಸಿಪಿಐ) ಇಂದು(ಶನಿವಾರ) ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮುಂದಾಳತ್ವದ ಎನ್‌ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಅಗ್ನಿಪಥ್‌ ಯೋಜನೆ ರದ್ದುಪಡಿಸುವ ದೃಷ್ಟಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

ಪಕ್ಷದ ಪ್ರಣಾಳಿಕೆ ಬಿಡುಗಡೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ, ಒಕ್ಕೂಟ ವ್ಯವಸ್ಥೆಯ ರಕ್ಷಣೆ ಜನರ ಹಕ್ಕುಗಳನ್ನು ರಕ್ಷಿಸಲು ಬಿಜೆಪಿಯನ್ನು ಅಧಿಕಾರದಿಂದ ಇಳಿಸಬೇಕಾದ ತುರ್ತಿದೆ. ಲೋಕಸಭಾ ಚುನಾವಣೆಯಲ್ಲಿ ಜನರು ಬಿಜೆಪಿ ಹಾಗೂ ಅದರ ಅಂಗ ಪಕ್ಷಗಳನ್ನು ಸೋಲಿಸಬೇಕು. ಆಗ ಮಾತ್ರ ಭಾರತ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ ಆಗಿ ಉಳಿಯುವುದಕ್ಕೆ ಸಾಧ್ಯವಿದೆ ಎಂದು ಹೇಳಿದೆ. ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಉಳಿಸಬೇಕಾಗಿದೆ ಎಂದು ಅವರು ಹೇಳಿದರು.

ಸಿಪಿಐ ಪ್ರಣಾಳಿಕೆಯಲ್ಲಿ ಏನಿವೆ ? : ಮುಖ್ಯಾಂಶಗಳು

  • ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದು
  • ಅಗ್ನಿಪಥ್‌ ಯೋಜನೆ ರದ್ದು
  • ಮೀಸಲಾತಿಯ ಶೇ. 50ರಷ್ಟು ಮಿತಿ ತೆಗೆದು ಹಾಕುವುದು.
  • ಶೇ.33 ರಷ್ಟು ಮೀಸಲಾತಿ ಜಾರಿ
  • ನರೇಗಾ ಯೋಜನೆ ಅಡಿಯಲ್ಲಿ 700 ರೂ. ಕನಿಷ್ಠ ಖಾತರಿ ವೇತನ.
  • ಹಳೆಯ ಪಂಚಣಿ ಯೋಜನೆ ಮರು ಜಾರಿ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!