spot_img
Monday, April 6, 2026
spot_img

ಕುಂದಾಪುರದಲ್ಲಿ ಉಚಿತ ಹೊಲಿಗೆ ಕೇಂದ್ರದ ಉದ್ಘಾಟನೆ

ಕುಂದಾಪುರ: ಗೆಳೆಯರ ಸ್ವಾವಲಂಬನ (ರಿ.) ಕುಂದಾಪುರ-ಮುಂಬೈ ಇವರ ಆಶ್ರಯದಲ್ಲಿ ಕುಂದಾಪುರದ ರಾಮ ಮಂದಿರ ಮಾರ್ಗದಲ್ಲಿ ವಿಜಯ ಟೆಕ್ಸ್‌ಟೈಲ್ಸ್ ಎದುರಿನ ಕಚೇರಿಯಲ್ಲಿ ಉಚಿತ ಹೊಲಿಗೆ ಕೇಂದ್ರದ ಉದ್ಘಾಟನೆಯು ಮಾರ್ಚ್ ೨೫ ರಂದು ಜರುಗಿತು.

ಉದ್ಘಾಟಕರಾಗಿ ಆಗಮಿಸಿದ ಪ್ರಸಿದ್ಧ ವಸ್ತ್ರ (ಡ್ರೆಸ್) ವಿನ್ಯಾಸಕಿ ಶ್ರೀಮತಿ ಪ್ರಮೀಳಾ ಅವರು ಕುಂದಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಹಿಳೆಯರು ಇದರ ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಹೊಲಿಗೆ ಶಿಬಿರಕ್ಕೆ ಶುಭ ಹಾರೈಸಿದರು.
ಕೇಂದ್ರದ ಅಧ್ಯಕ್ಷರಾದ ವೆಂಕಟೇಶ ಪೈ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಗೆಳೆಯರ ಸ್ವಾವಲಂಬನವು ಕಳೆದ ೧೨ ವರ್ಷಗಳಿಂದ ಕುಂದಾಪುರ-ಮುಂಬೈಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಟ್ಟೆ ಚೀಲ ಹೊಲಿಯುವುದರೊಂದಿಗೆ ಪ್ಲಾಸ್ಟಿಕ್ ತ್ಯಜಿಸಿ, ಬಟ್ಟೆ ಚೀಲ ಬಳಸಿ, ಪರಿಸರ ರಕ್ಷಿಸಿ ಎಂಬ ತತ್ವದೊಂದಿಗೆ ಸಮಾಜ ಸೇವೆಗೈಯುತ್ತಿದೆ. ೨೦೦ಕ್ಕೂ ಮಿಕ್ಕಿ ಪುರುಷ, ಮಹಿಳೆಯರು ಕೇಂದ್ರದಲ್ಲಿ ಚೀಲ ಹೊಲಿಯುತ್ತಿದ್ದಾರೆ.

ಈಗ ಕುಂದಾಪುರದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಾಥಮಿಕ ಹೊಲಿಗೆ, ಇಲೆಕ್ಟ್ರಿಕ್ ಮೋಟರ್ ಅಳವಡಿಸಿ ಹೊಲಿಗೆ, ಆಲ್ಟ್ರೇಷನ್, ಫಿಟ್ಟಿಂಗ್, ಬಟ್ಟೆ ಚೀಲಗಳ ಹೊಲಿಗೆ, ಹೊಲಿಗೆ ಯಂತ್ರದ ಸಣ್ಣ ಪುಟ್ಟ ರಿಪೇರಿ ಇತ್ಯಾದಿಗಳನ್ನು ಕಲಿಸಲಾಗುವುದು. ಸಮಯ ಬೆಳಿಗ್ಗೆ ೧೦:೦೦ ರಿಂದ ಮಧ್ಯಾಹ್ನ ೧:೦೦ ರ ತನಕ, ವಯೋಮಿತಿ ಇಲ್ಲ ಎಂದರು.
ಹೊಲಿಗೆ ಶಿಬಿರದ ಶಿಕ್ಷಕಿ ಶ್ರೀಮತಿ ನಾಗಮಣಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!