Sunday, September 8, 2024

ಯುವ ಬಂಟರ ಸಂಘದ ವತಿಯಿಂದ 1.5 ಲಕ್ಷ ಸಹಾಯ ಧನ ವಿತರಣೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ಸಂಘದ ಆಡಳಿತ ಕಚೇರಿಯಲ್ಲಿ ಏಪ್ರಿಲ್ 10 ರಂದು ನಡೆಯಿತು.

ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸಿ ಮಾತನಾಡಿದ ಸಂಘದ ಮಹಾಪೋಷಕರಾದ ಆನಗಳ್ಳಿ ಕರುಣಾಕರ ಹೆಗ್ಡೆ ಮಾತನಾಡಿ ಸಂಘದ ವತಿಯಿಂದ ನೀಡುವ ಸಹಾಯಧನವನ್ನು ಸಮರ್ಪಕವಾಗಿ, ಸರಿಯಾದ ರೀತಿಯಲ್ಲಿ ತಾವು ಬಳಸಿಕೊಳ್ಳಬೇಕು ಎಂದು ಹೇಳಿದರು.
ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬಸ್ರೂರು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಹಿರಿಯ ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ ದಬ್ಬಾಡಿ, ಕ್ರೀಡಾ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಕುಂದಾಪುರ, ಉದಯ್ ಶೆಟ್ಟಿ ಹೊಸಂಗಡಿ ಮತ್ತು ಬೇರೆ ಬೇರೆ ಊರುಗಳಿಂದ ಬಂದ ಫಲಾನುಭವಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!