spot_img
Wednesday, April 1, 2026
spot_img

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮ

ಭಟ್ಕಳ: ಭಟ್ಕಳದ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ೨೦೨೪-ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ.ದಿನೇಶ್ ಗಾಂವ್ಕರ್ ಆಡಳಿತಾಧಿಕಾರಿಗಳು ಮತ್ತು ಪ್ರಾಂಶುಪಾಲರು, ಆರ್.ಎನ್.ಎಸ್ ಮುರ್ಡೇಶ್ವರ ಶಿಕ್ಷಣ ಸಂಸ್ಥೆಗಳು, ಇವರು ಪ್ರಾಸ್ತಾವಿಕ ಭಾಷಣ ಮಾಡಿ ಅಂಜುಮಾನ್ ತಾಂತ್ರಿಕ ಮಹಾವಿದ್ಯಾಲಯವು ಎಲ್ಲಾ ಭಾಷೆಗಳಿಗೆ ಪ್ರೋತ್ಸಾಹ ನೀಡುತ್ತಾ ಗುಡ್ಡದ ಮೇಲಿನ ಸ್ವರ್ಗವಾಗಿ ಕಂಗೊಳಿಸುತ್ತಿದೆ ಎಂದು ಹೇಳಿದರು. ನಮ್ಮ ಉತ್ತರಕನ್ನಡವು ಅನೇಕ ಕನ್ನಡ ಸಾಹಿತಿಗಳ ತವರು ಜಿಲ್ಲೆ ಮತ್ತು ಚುಟುಕು ಬ್ರಹ್ಮ ದಿನಕರ ದೇಸಾಯಿಯನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ಕಾಲೇಜು ಪ್ರಾಂಶುಪಾಲರಾದ ಡಾ. ಫಜ್ಲುರ್ ರೆಹಮಾನ್ ರವರು ಮಾತನಾಡಿ ಭಾಷೆಯು ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
ಕನ್ನಡ ವೇದಿಕೆಯ ಸಂಚಾಲಕರಾದ ಡಾ. ಪದ್ಮಯ್ಯ ನಾಯ್ಕರವರು ಮಾತನಾಡಿ ನಮ್ಮ ಸಣ್ಣ ಪ್ರಯತ್ನವೂ ಸಹ ವ್ಯರ್ಥವಲ್ಲ ಮತ್ತು ಸದಾ ಪ್ರಯತ್ನಶೀಲರಾಗಬೇಕೆಂದು ಕರೆ ಕೊಟ್ಟರು.

ಕನ್ನಡ ವೇದಿಕೆಯ ವಿದ್ಯಾರ್ಥಿ ಸಂಚಾಲಕ ಸಾಬಿತ್ ಸಾಹೇಬ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯದರ್ಶಿ ಭಾವನಾ ಸ್ವಾಗತಿಸಿ, ಸುನೀತಾ ವಂದಿಸಿದರು. ಅನನ್ಯ ಮತ್ತು ಪ್ರಗತಿ ಕಾರ್ಯಕ್ರಮವನ್ನು ನಿರೂಪಿಸಿದರು ಎಂದು ಮಾಧ್ಯಮ ಸಂವಹನಾಧಿಕಾರಿ ಸುಬ್ರಮಣ್ಯ ಗಜಾನನ ಭಾಗವತ್ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!