spot_img
Saturday, February 14, 2026
spot_img

ಮೇ.10ರಂದು ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ

ಕೋಟ: ಕೋಟ ಪ್ರೌಢಶಾಲೆ ಹತ್ತಿರದಲ್ಲಿರುವ ಹಂದೆ ಶ್ರೀ ಮಹಾವಿಷ್ಣು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 10-05-2024ರ ಅಕ್ಷಯ ತೃತೀಯಾದಂದು ರಥೋತ್ಸವ ನಡೆಯಲಿದೆ. ದಿನಾಂಕ 05-05-2024ರಿಂದ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಹಾಗೂ ಸಭಾಕಾರ್ಯಕ್ರಮ, ಸನ್ಮಾನ ಮತ್ತು ಸಾಂಸ್ಕøತಿಕ ಕಾರ್ಯಗಳು ದಿನಾಂಕ 09-05-2024ರಂದು ದೇವಸ್ಥಾನದ ಶ್ರೀ ನಾಗಪ್ಪಯ್ಯ ಹಂದೆ ರಂಗಮಂಟಪದಲ್ಲಿ ನಡೆಯಲಿದೆ.

ದಿನಾಂಕ 09-05-2024ರಂದು ಸಂಜೆ 5.00ರಿಂದ ಸಭಾಕಾರ್ಯಕ್ರಮ ಮತ್ತು ಸ್ಥಳೀಯ ವಿಶೇಷ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನ ಕಾರ್ಯಕ್ರಮ ಹಾಗೂ ಗಂಟೆ 7.30ರಿಂದ ಯಕ್ಷದೇಗುಲ ಬೆಂಗಳೂರು ತಂಡ ಮತ್ತು ಅತಿಥಿಕಲಾವಿದರ ಕೂಡುವಿಕೆಯಲ್ಲಿ “ಸುದರ್ಶನ ಗರ್ವಭಂಗ” ಯಕ್ಷಗಾನ ಪ್ರದರ್ಶನ ನಡೆಯಲಿದೆ. ಈ ಸಂದರ್ಭದಲ್ಲಿ ಯಕ್ಷಗಾನದ ಆರು ಜನ ಹಾಸ್ಯ ಕಲಾವಿದರಿಗೆ ನಿವೃತ್ತ ಶಿಕ್ಷಕರಾದ ಹೆಚ್. ಸೂರ್ಯನಾರಾಯಣ ಹಂದೆ ವಿಶೇಷ ಪುರಸ್ಕಾರ ನೀಡಲಿದ್ದಾರೆ. ದಿನಾಂಕ 10-05-2024ರಂದು ಸಂಜೆ 7.00ರಿಂದ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಮೆಕ್ಕೆಕಟ್ಟು ಅವರಿಂದ ಯಕ್ಷಗಾನ “ಗದಾಯುದ್ಧ ಮತ್ತು ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ ನಡೆಯಲಿದೆ. 11-05-2024ರಂದು ಸಂಜೆ 6.00ರಿಂದ ಸ್ಥಳೀಯ ಪ್ರತಿಭೆಗಳಿಂದ ‘ನೃತ್ಯಾಂಜಲಿ’, ನಂತರ 7.00ರಿಂದ ಅರೆಹೊಳೆ ಪತ್ರಿಷ್ಠಾನ ‘ನಂದಗೋಕುಲ’ ಸಾಂಸ್ಕøತಿಕ ತಂಡದವರಿಂದ ‘ನೃತ್ಯ ವೈಭವ’. ರಾತ್ರಿ 9.30ರಿಂದ ತ್ರೀನೇತ್ರ ಕಲಾತಂಡ ಉಪ್ಲಾಡಿ ಇವರಿಂದ ‘ಗಗ್ಗರ ದೈವದನಿ’ ನಗೆನಾಟಕ ಪ್ರದರ್ಶನ ನಡೆಯಲಿದೆ.

09-05-2024 ಗುರುವಾರ ಸಂಜೆ 4.00ರಿಂದ ಶ್ರೀ ಮಹಾಗಣಪತಿ ಮಹಿಳಾ ಭಜನಾ ಮಂಡಳಿ ಕಾರ್ಕಡ, 10-05-2024ರ ಶುಕ್ರವಾರ ಬೆಳಿಗ್ಗೆ 10ರಿಂದ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಸದಸ್ಯರಿಂದ, ಸಂಜೆ 4.00ರಿಂದ ಶ್ರೀ ರಾಮ ಮಹಿಳಾ ಭಜನಾ ಮಂಡಳಿ ಮಣೂರು, 11-05-2024 ಶನಿವಾರ ಸಂಜೆ 4.00ರಿಂದ ಶ್ರೀ ರಾಮ ಭಜನಾ ಮಂಡಳಿ, ಸಾಲಿಗ್ರಾಮ ಈ ಎಲ್ಲಾ ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ 10-05-2024 ಭಾನುವಾರ ಬೆಳಿಗ್ಗೆ 10.30ರಿಂದ ಶ್ರೀ ಮಹಾಗಣಪತಿ ಮಹಿಳಾ ವೇದಿಕೆ, ಹಂದೆ ದೇವಸ್ಥಾನ ಕೋಟ ಇವರಿಂದ ಲಲಿತಾ ಸಹಸ್ರನಾಮ ಮತ್ತು ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ. ಅಲ್ಲದೇ 11-05-2024ರಂದು ವಿಶೇಷವಾಗಿ ರಾತ್ರಿ ತೆಪ್ಪೋತ್ಸವ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಅಮರ್ ಹಂದೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದೇವಸ್ಥಾನ ಸುಮಾರು 600ಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯದು. ಇಲ್ಲಿನ ಶಿಲಾ ಶಾಸನ ಹಾಗೂ ಇತರ ಉಲ್ಲೇಖಗಳಿಂದ ಈ ದೇವಸ್ಥಾನಕ್ಕೆ 600ಕ್ಕೂ ಹೆಚ್ಚು ವರ್ಷಗಳಷ್ಟು ಇತಿಹಾಸ ಇರುವುದು ಕಂಡುಬರುತ್ತದೆ. ಕೋಟ ಮಹಾ ಜಗತ್ತಿನ ಪ್ರಮುಖ ಮನೆತನದವರಾದ ಹಂದೆ ಅವರ ಕುಟುಂಬದ ಪಾರಂಪರಿಕ ಪರಮಾರಾಧ್ಯ ದೇವರಾದ್ದರಿಂದಲೂ ಆಡಳಿತವನ್ನು ಅವರೇ ನಿರ್ವಹಿಸುತ್ತಾ ಬಂದ ಕಾರಣದಿಂದ ಹಂದೆ ದೇವಸ್ಥಾನ ಎಂಬ ಹೆಸರು ವಾಡಿಕೆಯಲ್ಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!