spot_img
Saturday, February 14, 2026
spot_img

ಜೂನ್ 1ರಿಂದ ತೆಕ್ಕಟ್ಟೆ ಯಶಸ್ವಿ ಯಕ್ಷಗಾನ ಕೇಂದ್ರದ ಹಿಮ್ಮೇಳ ತರಗತಿಗಳು ಆರಂಭ

ತೆಕ್ಕಟ್ಟೆ:  ಯಕ್ಷಗಾನವು ಅಲ್ಲಲ್ಲಿ ಕಲಿಕಾ ಕೇಂದ್ರಗಳ ಮೂಲಕ ಪ್ರಬುದ್ಧತೆ ಹೊಂದುತ್ತಿದೆ. ಕೊಮೆ ತೆಕ್ಕಟ್ಟೆಯ ಯಶಸ್ವೀ ಕಲಾವೃಂದ ತೆಕ್ಕಟ್ಟೆ ಹಯಗ್ರೀವವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ಬಡಗು ಯಕ್ಷಗಾನದ ಭಾಗವತಿಗೆ, ಚಂಡೆ, ಮದ್ದಳೆ, ಹೆಜ್ಜೆಗಳನ್ನು ಕಲಿಸುತ್ತಾ ಪ್ರತೀ ವರ್ಷ ಒಂದಷ್ಟು ಕಲಾವಿದರನ್ನು ರಂಗಕ್ಕೆ ಸಿದ್ಧಗೊಳಿಸಿ, ಕೊಡುಗೆಯಾಗಿಸಿ ಹೆಸರು ಮಾಡಿದೆ. 2024ನೇ ಸಾಲಿನ ಜೂನ್ 1ರಿಂದ ಆರು ತಿಂಗಳುಗಳ ಕಾಲದ ಕಲಿಕೆಗೆ ಮತ್ತೆ ತೆಕ್ಕಟ್ಟೆ ಹಯಗ್ರೀವ ತೆರೆದುಕೊಳ್ಳುತ್ತಿದೆ. ಪ್ರತೀ ದಿನ ಮಧ್ಯಾಹ್ನ ಗಂಟೆ ೩ರಿಂದ ಆರಂಭವಾಗುವ ತರಗತಿಗೆ ಪ್ರಾಚಾರ್ಯ ಕೆ.ಪಿ. ಹೆಗಡೆ, ದೇವದಾಸ್ ರಾವ್ ಕೂಡ್ಲಿ, ಲಂಬೋದರ ಹೆಗಡೆ ನಿಟ್ಟೂರು ತೆಕ್ಕಟ್ಟೆ ಕಲಿಕಾ ಕೇಂದ್ರದಲ್ಲಿ ಗುರುಗಳಾಗಿ ಕಾಣಿಸಿಕೊಳ್ಳಲಿದ್ದಾರೆ.

ತರಗತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುದರ್ಶನ ಉರಾಳ, ಯಕ್ಷ ಸಂಘಟಕ, ಕಲಾವಿದ ಮಹಮದ್ ಗೌಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತರಗತಿಗೆ ಸೇರಲು ಬಯಸುವವರು 9945947771 ಸಂಪರ್ಕಿಸಬಹುದು ಎಂದು ಯಶಸ್ವೀ ಕಲಾವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!