spot_img
Friday, January 17, 2025
spot_img

ಪಡುಕರೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌-ಕಾಲೇಜು ಕ್ರಿಕೆಟ್‌ ಪಂದ್ಯಾಟ

 

ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ, ಇಲ್ಲಿ ದಿನಾಂಕ: 24.05.2024ರಂದು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ ಕಾಲೇಜು ಕ್ರಿಕೆಟ್‌ ಪಂದ್ಯಾಟವನ್ನು ಆಯೋಜಿಸಲಾಗಿದೆ.

ಗೀತಾನಂದ ಫೌಂಡೇಶನ್‌ ನಪ್ರವರ್ತಕರಾದ ಆನಂದ್‌ ಸಿ ಕುಂದರ್‌, ಇವರು ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೋಟಪೋಲಿಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರಾದ ತೆಜಸ್ವಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕಶಿಕ್ಷಣ ವಿಭಾಗದ ಸಹನಿರ್ದೇಶಕರಾದ ಹರಿದಾಸ್‌ ಕುಳೂರು, ತೋಳಾರ್‌ ಓಶಿಯನ್‌ ಪ್ರೊಡಕ್ಟ್‌ ಇದರ ಆಡಳಿತ ನಿರ್ದೇಶಕರಾದ ಡಾ. ಪ್ರಕಾಶ್‌ ತೋಳಾರ್‌ ಹಾಗೂ ಕಾಲೇಜಿನಹಳೆ-ವಿದ್ಯಾರ್ಥಿಸಂಘದ ಅಧ್ಯಕ್ಷರಾದ  ಸುದಿನ   ಉಪಸ್ಥಿತರಿರುತ್ತಾರೆ. ಅಪರಾಹ್ನ 4:00 ಗಂಟೆಗೆ ನಡೆಯಲಿರು ವಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೀತಾನಂದ ಫೌಂಡೇಶನ್‌ನ ಪ್ರವರ್ತಕರಾದ  ಆನಂದ್‌ ಸಿಕುಂದರ್‌, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ  ರಮೇಶ್‌ ಹೆಚ್‌ ಕುಂದರ್‌ ಹಾಗೂ ಕಾಲೇಜಿನ ಹಳೆ-ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪ್ರಸಾದ್‌ ಬಿಲ್ಲವ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನೀತ ವಿ ವಹಿಸಲಿದ್ದು, ಈ ಪಂದ್ಯಾಟದ ಸಂಘಟಕರಾದ ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕರಾದ ಡಾ. ಮನೋಜ್‌ಕುಮಾರ್‌ ಎಂ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್‌ ಸಂತೋಷ್‌ ಡಿಸೋಜ ಉಪಸ್ಥಿತರಿರುತ್ತಾರೆ.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!